‘ಚುನಾವಣೆ ಪ್ರಚಾರಕ್ಕೆ ನನ್ನ ಜಾತಿ ಅಡ್ಡ ಬರುತ್ತೆ ಅನ್ಸುತ್ತೆ’: ರವಿಚಂದ್ರನ್​

Updated on: Mar 18, 2024 | 8:44 PM

‘ಎಲೆಕ್ಷನ್​ ಕ್ಯಾಂಪೇನ್​ಗೆ ಸಾಮಾನ್ಯವಾಗಿ ಯಾರೂ ನನ್ನನ್ನು ಕರೆಯೋದಿಲ್ಲ. ನನ್ನ ಜಾತಿ ಅವರಿಗೆ ಅಡ್ಡ ಬರುತ್ತದೆ ಅನ್ಸುತ್ತೆ. ನನಗೆ ಅದು ಗೊತ್ತಿಲ್ಲ’ ಎಂದು ರವಿಚಂದ್ರನ್​ ಹೇಳಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗಿ ಆಗುತ್ತೀರಾ ಎಂದು ಕೇಳಿದ್ದಕ್ಕೆ ಅವರು ಈ ರೀತಿ ಉತ್ತರಿಸಿದ್ದಾರೆ. ಈ ಕುರಿತು ಅವರು ಮಾತನಾಡಿದ ವಿಡಿಯೋ ಇಲ್ಲಿದೆ..

ದೇಶಾದ್ಯಂತ ಲೋಕಸಭಾ ಚುನಾವಣೆ (Lok Sabha Elections) ಕಾವು ಜೋರಾಗುತ್ತಿದೆ. ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರಕ್ಕೆ ಚಾಲನೆ ನೀಡಿವೆ. ಚಿತ್ರರಂಗದ ಅನೇಕ ಸೆಲೆಬ್ರಿಟಿಗಳನ್ನು ಪ್ರಚಾರಕ್ಕೆ (Political Campaign) ಬಳಸಿಕೊಳ್ಳಲಾಗುತ್ತಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪರವಾಗಿ ನಟ-ನಟಿಯರು ಪ್ರಚಾರಕ್ಕೆ ಇಳಿಯಲಿದ್ದಾರೆ. ಹಾಗಾದ್ರೆ ರವಿಚಂದ್ರನ್​ ಕೂಡ ಪ್ರಚಾರಕ್ಕೆ ಹೋಗುತ್ತಾರಾ? ಸುದ್ದಿಗೋಷ್ಠಿಯೊಂದರಲ್ಲಿ ರವಿಚಂದ್ರನ್​ ಅವರಿಗೆ ಈ ಪ್ರಶ್ನೆ ಎದುರಾಗಿದೆ. ಅದಕ್ಕೆ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ಸಾಮಾನ್ಯವಾಗಿ ಕ್ಯಾಂಪೇನ್​ಗೆ ನನ್ನನ್ನು ಯಾರೂ ಕರೆಯುವುದಿಲ್ಲ. ಅವರಿಗೆ ನನ್ನ ಜಾತಿ ಅಡ್ಡ ಬರುತ್ತದೆ ಎನಿಸುತ್ತದೆ. ಅದು ನನಗೆ ಗೊತ್ತಿಲ್ಲ. ಒಂದು ವೇಳೆ ಪ್ರಚಾರಕ್ಕೆ ಕರೆದರೆ ನಾನು ಸ್ನೇಹಿತರಿಗೆ ಇಲ್ಲ ಅಂತ ಹೇಳಲ್ಲ. ನನಗೆ ಯಾವುದೇ ಅಭ್ಯಂತರ ಇಲ್ಲ. ಆದರೆ ಯಾವುದೇ ಪಕ್ಷಕ್ಕೆ ನಾನು ಅಂಟಿಕೊಳ್ಳಲ್ಲ. ನನ್ನದು ಕಾಮನ್​ ಪಾರ್ಟಿ. ಪ್ರಚಾರಕ್ಕೆ ಹೋಗುವ ಐಡಿಯಾ ಇರಲ್ಲ. ಬೇರೆ ವಿಚಾರಗಳ ಮೇಲೂ ಅದು ಅವಲಂಬಿತ ಆಗಿರುತ್ತೆ’ ಎಂದು ರವಿಚಂದ್ರನ್​ (Ravichandran) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More