Karnataka Assembly Polls: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸಚಿವ ವಿ ಸೋಮಣ್ಣ? ಗುಟ್ಟು ಬಿಟ್ಟುಕೊಡದ ಬಿಎಸ್ ಯಡಿಯೂರಪ್ಪ

Updated on: Apr 06, 2023 | 11:52 AM

ಕೇಂದ್ರದ ನಾಯಕರು ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳುತ್ತಾರೆ, ಪಟ್ಟಿಯನ್ನು ನಾಳೆ ದೆಹಲಿಗೆ ಕಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಬೆಂಗಳೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಯಾರನ್ನು ಕಣಕ್ಕಿಸುವುದು ಅಂತ ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಂತಿದೆ. ಮೊದಲಿಗೆ ಬಿಎಸ್ ಯಡಿಯೂರಪ್ಪರ (BS Yediyurappa) ಮಗ ಬಿವೈ ವಿಜಯೇಂದ್ರ ಸ್ಪರ್ಧಿಸುತ್ತಾರೆ ಅಂತ ವದಂತಿ ಹರಡಿತ್ತು. ಆದರೆ, ಅವರು ಶಿಕಾರಿಪುರದಿಂದ ಸ್ಪರ್ಧಿಸುವುದು ಖಚಿತವಾಗಿದೆ ಮತ್ತು ಕ್ಷೇತ್ರದಲ್ಲಿ ಪ್ರಚಾರವನ್ನೂ ಆರಂಭಿಸಿದ್ದಾರೆ. ತಾಜಾ ಮಾಹಿತಿಯೊಂದರ ಪ್ರಕಾರ ಸಚಿವ ವಿ ಸೋಮಣ್ಣ (V Somanna) ವರುಣಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಅದರ ದೃಡೀಕರಣಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಯಡಿಯೂರಪ್ಪರನ್ನು ಪ್ರಶ್ನಿಸಿದಾಗ ಅವರಿಂದ ಸ್ಪಷ್ಟ ಉತ್ತರ ಸಿಗಲಿಲ್ಲ. ಕೇಂದ್ರದ ನಾಯಕರು ಅಂತಿಮ ನಿರ್ಣಯ ತೆಗೆದುಕೊಳ್ಳುತ್ತಾರೆ, ಅಭ್ಯರ್ಥಿಗಳ ಪಟ್ಟಿ ನಾಳೆ ದೆಹಲಿಗೆ ಕಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More