ಸಿಎಂ, ಡಿಸಿಎಂ ಹಗಲೇ ನಾಟಕ ಮಾಡ್ತಿದ್ದಾರೆ: ಕೇಂದ್ರ ಸಚಿವ ಸೋಮಣ್ಣ ಕಿಡಿ

Updated on: Oct 21, 2025 | 2:01 PM

ಎಲ್ಲರೂ ಸಂಜೆ ನಾಟಕ ಆಡಿದ್ರೆ, ಸಿಎಂ ಮತ್ತು ಡಿಸಿಎಂ ಹಗಲೇ ನಾಟಕ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ಈಗ ವಿರೋಧ ಮಾಡುವವರು ಮುಂದೆ RSS ಸದಸ್ಯರಾಗಲಿದ್ದಾರೆ. ಸಿದ್ದರಾಮಯ್ಯ ಇಷ್ಟು ಸುಳ್ಳು ಹೇಳುತ್ತಾರೆ ಅಂತಾ ಗೊತ್ತಿರಲಿಲ್ಲ. ಆರ್‌ಎಸ್‌ಎಸ್ ವಿರುದ್ಧ ಹುನ್ನಾರ ಮಾಡ್ತಿರುವುದು ವಿಪರ್ಯಾಸ ಎಂದಿದ್ದಾರೆ.

ದೆಹಲಿ, ಅಕ್ಟೋಬರ್​  21: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ (V. Somanna) ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧ ಹುನ್ನಾರ ಮಾಡ್ತಿರುವುದು ವಿಪರ್ಯಾಸ, ಎಲ್ಲರೂ ಸಂಜೆ ನಾಟಕ ಆಡಿದ್ರೆ, ಸಿಎಂ ಮತ್ತು ಡಿಸಿಎಂ ಹಗಲೇ ನಾಟಕ ಮಾಡುತ್ತಿದ್ದಾರೆ. ಈಗ ವಿರೋಧ ಮಾಡುವವರು ಮುಂದೆ RSS ಸದಸ್ಯರಾಗಲಿದ್ದಾರೆ. ಸಿದ್ದರಾಮಯ್ಯ ಇಷ್ಟು ಸುಳ್ಳು ಹೇಳುತ್ತಾರೆ ಅಂತಾ ಗೊತ್ತಿರಲಿಲ್ಲ. ಸಿದ್ದರಾಮಯ್ಯ ಅಭಿವೃದ್ಧಿ ಕಡೆ ಗಮನಹರಿಸಬೇಕಿದೆ ಎಂದು ದೆಹಲಿಯಲ್ಲಿ ಸೋಮಣ್ಣ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More