AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮಣ್ಣ ಎಲ್ಲೂ ಹೋಗಲ್ಲ, ನಮ್ಮೊಂದಿಗಿರುತ್ತಾರೆ; ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ

ಸೋಮಣ್ಣ ಎಲ್ಲೂ ಹೋಗಲ್ಲ, ನಮ್ಮೊಂದಿಗಿರುತ್ತಾರೆ; ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Dec 06, 2023 | 4:07 PM

Share

ಬರ ಪರಿಹಾರ ನಿಧಿಗೆ ಸಂಬಂಧಿಸಿದಂತೆ, ಬಿಜೆಪಿ ಸಂಸದರು ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ವಿಜಯಯೇಂದ್ರ ಸಹ ಅವರೊಂದಿಗೆ ಮಾತಾಡಿದ್ದಾರೆ, ಆದಷ್ಟು ಬೇಗ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡುತ್ತೇವೆ ಅಂತ ಹೇಳಿದ ಯಡಿಯೂರಪ್ಪ, ಹಾಗಂತ ರಾಜ್ಯ ಸರ್ಕಾರ ಪರಿಹಾರ ನಿಧಿ ನಿರೀಕ್ಷೆಯಲ್ಲಿ ಕೈಕಟ್ಟಿ ಕುಳಿತಿಕೊಳ್ಳಬಾರದು, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದರು.

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ (Assembly Polls) ಮೊದಲು ಮತ್ತು ನಂತರ ಬಿಜೆಪಿ ನಾಯಕ ವಿ ಸೋಮಣ್ಣ (V Somanna) ಅವರು ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಿವೈ ವಿಜಯೇಂದ್ರ (BY Vijayendra) ವಿರುದ್ಧ ಬಹಿರಂಗವಾಗೇ ಅಸಮಾಧಾನ ವ್ಯಕ್ತಪಡಿಸಿದ್ದರು ಮತ್ತು ಅವರಿಂದಾಗಿಯೇ ಚುನಾವಣೆಗೆ ಮೊದಲು ಅವರು ಕಾಂಗ್ರೆಸ್ ಸೇರಲಿರುವ ವದಂತಿ ಹರಡಿತ್ತು. ಅಮೇಲೆ ನಡೆದಿದ್ದೆಲ್ಲ ಕನ್ನಡಿಗರಿಗೆ ಗೊತ್ತಿದೆ. ಈಗ ಸೋಮಣ್ಣ ಕಾಂಗ್ರೆಸ್ ಸೇರುವ ಬಗ್ಗೆ ಮತ್ತೊಮ್ಮೆ ವದಂತಿ ಹರಡುತ್ತಿದೆ. ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಯಡಿಯೂರಪ್ಪನ್ನು ಕೇಳಿದಾಗ, ಸೋಮಣ್ಣ ಎಲ್ಲೂ ಹೋಗಲ್ಲ, ತಮ್ಮ ಪಕ್ಷದಲ್ಲೇ ಇರುತ್ತಾರೆ, ತಾನು ಅವರೊಂದಿಗೆ ಮಾತಾಡುವುದಾಗಿ ಹೇಳಿದರು. ಬರ ಪರಿಹಾರ ನಿಧಿ ಇನ್ನೂ ಕೇಂದ್ರದಿಂದ ಬಿಡುಗಡೆಯಾಗಿಲ್ಲ ಅಂತ ಅವರಿಗೆ ಹೇಳಿದಾಗ, ಬಿಜೆಪಿ ಸಂಸದರು ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ವಿಜಯಯೇಂದ್ರ ಅಹ ಅವರೊಂದಿಗೆ ಮಾತಾಡಿದ್ದಾರೆ, ಆದಷ್ಟು ಬೇಗ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡುತ್ತೇವೆ ಅಂತ ಹೇಳಿದ ಯಡಿಯೂರಪ್ಪ, ಹಾಗಂತ ರಾಜ್ಯ ಸರ್ಕಾರ ಪರಿಹಾರ ನಿಧಿ ನಿರೀಕ್ಷೆಯಲ್ಲಿ ಕೈಕಟ್ಟಿ ಕುಳಿತಿಕೊಳ್ಳಬಾರದು, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.