Mandya: ಪ್ರಜಾಧ್ವನಿಯಾತ್ರೆ ಸಮಾವೇಶದಲ್ಲಿ ಜನಕ್ಕಿಂತ ಜಾಸ್ತಿ ಖಾಲಿ ಕುರ್ಚಿ ಕಂಡವು!

ಅರುಣ್​ ಕುಮಾರ್​ ಬೆಳ್ಳಿ

Updated on: Jan 27, 2023 | 4:21 PM

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಂಥ ನಾಯಕರು ಮಂಡ್ಯದಲ್ಲಿ ಜನರನ್ನು ಸೆಳೆಯಲು ವಿಫಲರಾದರೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಬಹುದು ಅಂತ ಊಹಿಸಬಹುದು.

ಮಂಡ್ಯ: ನಗರದಲ್ಲಿ ಶುಕ್ರವಾರ ನಡೆದ ಪ್ರಜಾಧ್ವನಿ ಯಾತ್ರೆ (Prajadhvani Yatre) ಸಮಾವೇಶ ಭಾರೀ ಸಕ್ಸಸ್ ಅಂತ ಕಾಂಗ್ರೆಸ್ ನಾಯಕರು ಹೇಳಬಹುದು. ಆದರೆ ಗ್ರೌಂಡ್ ರಿಪೋರ್ಟ್ ಅದಕ್ಕೆ ವ್ಯತಿರಿಕ್ತವಾಗಿದೆ ಮಾರಾಯ್ರೇ. ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗಾಗಿ ಸಾವಿರಾರು ಕುರ್ಚಿಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಅವುಗಳಲ್ಲಿ ಅರ್ಧಕ್ಕಿಂತ ಜಾಸ್ತಿ ಕುರ್ಚಿಗಳು ಖಾಲಿಯಿದ್ದವು. ವಿಡಿಯೋದಲ್ಲಿ ಅದು ಬಹಳ ಸ್ಪಷ್ಟವಾಗಿ ಕಾಣುತ್ತಿದೆ. ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ ರಂಥ (DK Shivakumar) ನಾಯಕರು ಮಂಡ್ಯದಲ್ಲಿ ಜನರನ್ನು ಸೆಳೆಯಲು ವಿಫಲರಾದರೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಬಹುದು ಅಂತ ಊಹಿಸಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.