AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaikunta Ekadashi: ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!

Vaikunta Ekadashi: ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!

ಭಾವನಾ ಹೆಗಡೆ
|

Updated on: Dec 30, 2025 | 8:41 AM

Share

ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ವೆಂಕಟೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಈ ವರ್ಷ ಎರಡು ಬಾರಿ ವೈಕುಂಠ ಏಕಾದಶಿ ಬಂದಿದ್ದು, ಭಕ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ತಿರುಪತಿ ತಿರುಮಲಕ್ಕೆ ಹೋಗಲು ಸಾಧ್ಯವಾಗದ ಭಕ್ತರಿಗಾಗಿ ಈ ದೇಗುಲವು ತಿರುಪತಿಯ ಅನುಭವವನ್ನು ನೀಡುತ್ತಿದೆ.

ಬೆಂಗಳೂರು, ಡಿಸೆಂಬರ್ 30: ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ವೆಂಕಟೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಈ ವರ್ಷ ಎರಡು ಬಾರಿ ವೈಕುಂಠ ಏಕಾದಶಿ ಬಂದಿದ್ದು, ಭಕ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ತಿರುಪತಿ ತಿರುಮಲಕ್ಕೆ ಹೋಗಲು ಸಾಧ್ಯವಾಗದ ಭಕ್ತರಿಗಾಗಿ ಈ ದೇಗುಲವು ತಿರುಪತಿಯ ಅನುಭವವನ್ನು ನೀಡುತ್ತಿದೆ. ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದ್ದು, ದೇವಸ್ಥಾನವನ್ನು ಹೂವುಗಳಿಂದ ಅಲಂಕರಿಸಲಾಗಿದೆ. ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದ್ದು, ವಯೋವೃದ್ಧರು ಮತ್ತು ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ಭಕ್ತರಿಗೆ ಬೆಳಗ್ಗೆ 3:30 ರಿಂದ ರಾತ್ರಿ 9 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More