Vaikuntha Ekadashi: ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

Edited By:

Updated on: Jan 10, 2025 | 10:00 AM

ಕರ್ನಾಟಕದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮುಗಿಲುಮುಟ್ಟಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ವಿವಿಧ ವೆಂಕಟರಮಣಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆಗಳು ನೆರವೇರುತ್ತಿವೆ. ಮುಂಜಾನೆಯಿಂದಲೇ ದೇಗುಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಕೋಲಾರದ ಚಿಕ್ಕತಿರುಪತಿಯಲ್ಲೂ ವೈಕುಂಠ ಏಕಾದಶಿ ಆಚರಣೆ ಜೋರಾಗಿದೆ. ವಿಡಿಯೋ ಇಲ್ಲಿದೆ.

ಕೋಲಾರ, ಜನವರಿ 10: ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ದೇವಾಲಯಕ್ಕೆ ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬಂದಿದೆ. ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ವೈಕುಂಠ ದ್ವಾರ ಪ್ರವೇಶ ಮಾಡುತ್ತಿದ್ದಾರೆ.

ಕೋಲಾರ, ಬೆಂಗಳೂರು, ಆಂಧ್ರ, ತಮಿಳುನಾಡು ಸೇರಿದಂತೆ ಹಲವೆಡೆಯಿಂದ ಭಕ್ತರು ಬರುತ್ತಿದ್ದಾರೆ. ಬಗೆ ಬಗೆ ಹೂಗಳಿಂದ ದೇವರಿಗೆ ಅಲಂಕಾರ, ಮಾಡಲಾಗಿದ್ದು, ಎಲ್ಲೆಲ್ಲೂ ಗೋವಿಂದಾ ಗೋವಿಂದಾ ಎಂಬ ನಾಮ ಸ್ಮರಣೆ ಕೇಳಿಬರುತ್ತಿದೆ. ಸಾವಿರಾರು ಭಕ್ತರು ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮುಜರಾಯಿ ಇಲಾಖೆಯಿಂದ ದೇವಾಲಯದಲ್ಲಿ ಭಕ್ತರಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More