Vaikuntha Ekadashi: ವೈಕುಂಠ ಏಕಾದಶಿ ಸಂಭ್ರಮ, ತಿಮ್ಮಪ್ಪನ ಸನ್ನಿಧಿ ಸೇರಿ ದೇಶದಾದ್ಯಂತ ವಿಶೇಷ ಪೂಜೆ, ಪುನಸ್ಕಾರ

Updated on: Dec 30, 2025 | 7:39 AM

ವೈಕುಂಠ ಏಕಾದಶಿ 2025 ರ ಹಿನ್ನೆಲೆಯಲ್ಲಿ ದೇಶಾದ್ಯಂತ, ಅದರಲ್ಲೂ ಬೆಂಗಳೂರಿನ ವಿವಿಧ ಶ್ರೀನಿವಾಸ ದೇಗುಲಗಳಲ್ಲಿ ಸಂಭ್ರಮ ಮನೆಮಾಡಿದೆ. ಅಮೃತ ನಗರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಚಳಿಯನ್ನು ಲೆಕ್ಕಿಸದೆ ಗೋವಿಂದನ ದರ್ಶನಕ್ಕಾಗಿ ಕಾದು ನಿಂತಿದ್ದಾರೆ. ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ.

ವೈಕುಂಠ ಏಕಾದಶಿ 2025 ರ ಹಿನ್ನೆಲೆಯಲ್ಲಿ ದೇಶಾದ್ಯಂತ ಪೂಜೆ ಮತ್ತು ಪುನಸ್ಕಾರದ ಸಡಗರ ಆವರಿಸಿದೆ. ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದುಬರುತ್ತಿದೆ. ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದ ಶ್ರೀನಿವಾಸ ದೇಗುಲಗಳಲ್ಲಿ ಹಬ್ಬದ ಕಳೆಗಟ್ಟಿದೆ. ಭಕ್ತರು ‘ಗೋವಿಂದ’ ನಾಮಸ್ಮರಣೆ ಮಾಡುತ್ತಾ ಭಕ್ತಿಯಿಂದ ವೈಕುಂಠ ಏಕಾದಶಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನ ಅಮೃತ ನಗರದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಚಳಿಯನ್ನು ಲೆಕ್ಕಿಸದೆ ದೇವರ ದರ್ಶನ ಪಡೆಯಲು ಸಾಲಿನಲ್ಲಿ ನಿಂತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More