AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಪಘಾತದಿಂದ ಯುವಕ-ಯುವತಿ ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್

ಚಿಕ್ಕಬಳ್ಳಾಪುರ ಜಿಲ್ಲೆಯ ವಾಪಸಂದ್ರ ಬಳಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಟೆಗೂ ಹೆಚ್ಚು ಕಾಲ ತುರ್ತು ಸೇವೆಗಳ ವಿಳಂಬದಿಂದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಗಾಯಗೊಂಡ ಯುವಕ-ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್, ಪೊಲೀಸರು ಬರದೆ ಹೋಯ್ದಾಗ, ಸಾರ್ವಜನಿಕರೇ ಮಾನವೀಯತೆ ಮೆರೆದು ರಕ್ಷಣೆಗೆ ಧಾವಿಸಿದರು. ಈ ಘಟನೆ ತುರ್ತು ಸೇವೆಗಳ ವೈಫಲ್ಯವನ್ನು ಎತ್ತಿ ತೋರಿಸಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Feb 17, 2026 | 4:33 PM

Share

ಚಿಕ್ಕಬಳ್ಳಾಪುರ, ಫೆ.17: ಜಿಲ್ಲೆಯ ವಾಪಸಂದ್ರ ಬಳಿ ಇಂದು (ಫೆ.17) ನಡೆದ ಭೀಕರ ರಸ್ತೆ ಅಪಘಾತವೊಂದು ತುರ್ತು ಸೇವೆಗಳ ವೈಫಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಅಪಘಾತವಾಗಿ ಗಂಟೆ ಕಳೆದರೂ ಆಂಬುಲೆನ್ಸ್ ಮತ್ತು ಪೊಲೀಸರು ಸ್ಥಳಕ್ಕೆ ಬಂದಿಲ್ಲ. ಕೊನೆಗೆ ಸಾರ್ವಜನಿಕರೇ ಮಾನವೀಯತೆ ಮೆರೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಈಶಾ ಫೌಂಡೇಷನ್‌ನಿಂದ ಬೆಂಗಳೂರು ಕಡೆಗೆ ಕೆಎ 05 ಎಲ್‌ವಿ 9152 ಸಂಖ್ಯೆಯ ಬೈಕ್‌ನಲ್ಲಿ ಯುವಕ ಮತ್ತು ಯುವತಿ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಉರುಳಿ ಬಿದ್ದು ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದರು. ಅಪಘಾತವಾದ ಕೂಡಲೇ ಸ್ಥಳೀಯರು ಆಂಬುಲೆನ್ಸ್ ಮತ್ತು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಗಂಟೆ ಕಳೆದರೂ ಯಾವುದೇ ತುರ್ತು ವಾಹನ ಸ್ಥಳಕ್ಕೆ ಆಗಮಿಸಿಲ್ಲ. ಗಾಯಾಳುಗಳ ಸ್ಥಿತಿ ಗಂಭೀರವಾಗುತ್ತಿರುವುದನ್ನು ಕಂಡು ಸಾರ್ವಜನಿಕರೇ ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ತುರ್ತು ಸೇವೆಗಳ ವೈಫಲ್ಯದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಸಕಾಲದಲ್ಲಿ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Tue, 17 February 26

ಮುಂಬೈ​​ನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜಾಗಿಂಗ್; ಕಣ್ಣೆತ್ತೂ ನೋಡದ ಜನ
ಮುಂಬೈ​​ನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜಾಗಿಂಗ್; ಕಣ್ಣೆತ್ತೂ ನೋಡದ ಜನ
‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ
‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ
30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ
30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ
ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬಚಾವ್​​
ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬಚಾವ್​​
VIDEO: ಅದ್ಭುತ, ಅತ್ಯದ್ಭುತ... ಇದು ವಿಶ್ವಕಪ್​ನ ಬೆಸ್ಟ್ ಕ್ಯಾಚ್!
VIDEO: ಅದ್ಭುತ, ಅತ್ಯದ್ಭುತ... ಇದು ವಿಶ್ವಕಪ್​ನ ಬೆಸ್ಟ್ ಕ್ಯಾಚ್!
ಬೆಂಗಳೂರಿನಲ್ಲಿ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ
ಬೆಂಗಳೂರಿನಲ್ಲಿ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ
ಮುಡಾ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಆಡಿಯೋ ಬಾಂಬ್​​ ಸಿಡಿಸಿದ ಸ್ನೇಹಮಯಿ
ಮುಡಾ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಆಡಿಯೋ ಬಾಂಬ್​​ ಸಿಡಿಸಿದ ಸ್ನೇಹಮಯಿ
ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ
ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ
ಭಾರತೀಯ ಎಐ ಆವಿಷ್ಕಾರಗಳನ್ನು ವೀಕ್ಷಿಸಿದ ಪ್ರಧಾನಿ ಮೋದಿ
ಭಾರತೀಯ ಎಐ ಆವಿಷ್ಕಾರಗಳನ್ನು ವೀಕ್ಷಿಸಿದ ಪ್ರಧಾನಿ ಮೋದಿ
ಬಿಕ್ಲು ಶಿವ ಕೊಲೆಗೆ ಕಾರಣವಾಗಿದ್ದು ಇದೇ ಘಟನೆ: Exclusive ವಿಡಿಯೋ ಇಲ್ಲಿದೆ
ಬಿಕ್ಲು ಶಿವ ಕೊಲೆಗೆ ಕಾರಣವಾಗಿದ್ದು ಇದೇ ಘಟನೆ: Exclusive ವಿಡಿಯೋ ಇಲ್ಲಿದೆ