AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವರ್ತೂರು ಸಂತೋಷ್ ಬಿಗ್​ಬಾಸ್ ಸಂಭಾವನೆ ಸೇರುವುದು ಅನಾಥಾಶ್ರಮಕ್ಕೆ’‘ವರ್ತೂರು ಸಂತೋಷ್ ಬಿಗ್​ಬಾಸ್ ಸಂಭಾವನೆ ಸೇರುವುದು ಅನಾಥಾಶ್ರಮಕ್ಕೆ’

‘ವರ್ತೂರು ಸಂತೋಷ್ ಬಿಗ್​ಬಾಸ್ ಸಂಭಾವನೆ ಸೇರುವುದು ಅನಾಥಾಶ್ರಮಕ್ಕೆ’

ಮಂಜುನಾಥ ಸಿ.
|

Updated on:Nov 15, 2023 | 10:45 PM

Share

Varthur Santhosh: ವರ್ತೂರು ಸಂತೋಷ್​ ಬಿಗ್​ಬಾಸ್ ಮನೆ ಪ್ರವೇಶಿಸಿದಾಗಿನಿಂದಲೂ ಅವರ ವಿವಾದಗಳು ಅವರ ಬೆನ್ನು ಬಿದ್ದಿವೆ. ಇದರ ನಡುವೆ ಅವರ ಗೆಳೆಯ ಮಹೇಶ್ ಎಂಬುವರು ಮಾತನಾಡಿ, ವರ್ತೂರು ಸಂತೋಷ್​ರನ್ನು ಕೊಂಡಾಡಿರುವ ಜೊತೆಗೆ ಸಂತೋಷ್ ಅವರ ಸಂಭಾವನೆಯನ್ನು ಅನಾಥಾಶ್ರಮಕ್ಕೆ ನೀಡಿದ್ದಾರೆ ಎಂದಿದ್ದಾರೆ.

ವರ್ತೂರು ಸಂತೋಷ್ (Varthur Santhosh) ಬಿಗ್​ಬಾಸ್ ಮನೆ ಪ್ರವೇಶಿಸಿದ ಮೇಲೆ ಕೆಲವು ವಿವಾದಗಳು ಅವರ ಬೆನ್ನು ಬಿದ್ದಿವೆ. ಮೊದಲಿಗೆ ಹುಲಿ ಉಗುರು ಪ್ರಕರಣದಲ್ಲಿ ಬಿಗ್​ಬಾಸ್ ಮನೆಯಿಂದಲೇ ಜೈಲಿಗೆ ಹೋದ ವರ್ತೂರು ಸಂತೋಷ್, ಅಲ್ಲಿಂದ ನೇರವಾಗಿ ಬಿಗ್​ಬಾಸ್ ಮನೆಗೆ ಮರಳಿದರು. ಆ ನಂತರವೂ ಅಲ್ಲಿ ನೆಮ್ಮದಿಯಿಂದ ಇರಲಾರದೆ ಒದ್ದಾಡಿದರು. ಈಗ ವರ್ತೂರು ಸಂತೋಷ್​ರ ಖಾಸಗಿ ಜೀವನದ ಬಗ್ಗೆ ಕೆಲವು ಸುದ್ದಿಗಳು ಹರಿದಾಡುತ್ತಿವೆ. ವರ್ತೂರು ಸಂತೋಷ್ ಅವರ ಮಾವ, ಸಂತೋಷ್ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದೀಗ ಸಂತೋಷ್​ರ ಗೆಳೆಯ ಮಹೇಶ್ ಎಂಬುವರು ಸಂತೋಷ್​ಗೆ ಸುತ್ತಿಕೊಂಡಿರುವ ವಿವಾದಗಳ ಬಗ್ಗೆ ಮಾತನಾಡಿರುವ ಜೊತೆಗೆ ವರ್ತೂರು ಸಂತೋಷ್​ಗೆ ಬಿಗ್​ಬಾಸ್​ನಿಂದ ಬರುವ ಸಂಭಾವನೆಯನ್ನು ಅವರು ಅನಾಥಾಶ್ರಮಕ್ಕೆ ನೀಡಿದ್ದಾರೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Nov 15, 2023 10:43 PM

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More