AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊದಲು ನೀವು ಏನು ಅಂತ ನೋಡಿಕೊಳ್ಳಿ’: ಸಂಗೀತಾಗೆ ವರ್ತೂರು ಸಂತೋಷ್​ ಆವಾಜ್​

‘ಮೊದಲು ನೀವು ಏನು ಅಂತ ನೋಡಿಕೊಳ್ಳಿ’: ಸಂಗೀತಾಗೆ ವರ್ತೂರು ಸಂತೋಷ್​ ಆವಾಜ್​

ಮದನ್​ ಕುಮಾರ್​
|

Updated on: Jan 17, 2024 | 5:04 PM

Share

ಸಂಗೀತಾ ಶೃಂಗೇರಿ ಮಾತನಾಡಿದ್ದು ವರ್ತೂರು ಸಂತೋಷ್​ ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ನೇರವಾಗಿ ಖಂಡಿಸಿದ್ದಾರೆ. ‘ನಾನು ಹೇಳೋದು ಕೇಳ್ರಿ. ಒಬ್ಬರ ಮೇಲೆ ಆರೋಪ ಮಾಡೋದಕ್ಕಿಂತ ಮುಂಚೆ ನೀವು ಏನು ಎಂಬುದನ್ನು ನೋಡಿಕೊಂಡರೆ ತುಂಬ ಉತ್ತಮವಾಗಿರುತ್ತೆ’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ.

ಬಿಗ್ ಬಾಸ್​ ಮನೆಯಲ್ಲಿ ಈಗ ಪೈಪೋಟಿ ಹೆಚ್ಚಾಗಿದೆ. ಫಿನಾಲೆಯಲ್ಲಿ (Bigg Boss Finale) ಟ್ರೋಫಿ ಗೆಲ್ಲಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದೆ. ಈಗಾಗಲೇ ಸಂಗೀತಾ ಶೃಂಗೇರಿ (Sangeetha Sringeri) ಅವರು ಫಿನಾಲೆಗೆ ಟಿಕೆಟ್​ ಪಡೆದಿದ್ದಾರೆ. ಇನ್ನುಳಿದ ಸ್ಪರ್ಧಿಗಳು ಫಿನಾಲೆ ತಲುಪಲು ಪ್ರಯತ್ನಿಸುತ್ತಿದ್ದಾರೆ. ಈ ಹಂತದಲ್ಲಿ ಸಂಗೀತಾ ಶೃಂಗೇರಿ ಮತ್ತು ವರ್ತೂರು ಸಂತೋಷ್​ ನಡುವೆ ಕಿರಿಕ್​ ಆಗಿದೆ. ಸಂಗೀತಾ ಮಾತನಾಡಿದ್ದು ವರ್ತೂರು ಸಂತೋಷ್ (Varthur Santhosh)​ ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ನೇರವಾಗಿ ಖಂಡಿಸಿದ್ದಾರೆ. ‘ಇದು ತುಂಬ ಅಗೌರವಯುತವಾಗಿ ಕಾಣಿಸುತ್ತಿದೆ. ನಾನು ಹೇಳೋದು ಕೇಳ್ರಿ. ಒಬ್ಬರ ಮೇಲೆ ಆರೋಪ ಮಾಡೋದಕ್ಕಿಂತ ಮುಂಚೆ ನೀವು ಏನು ಎಂಬುದನ್ನು ನೋಡಿಕೊಂಡರೆ ತುಂಬ ಉತ್ತಮವಾಗಿರುತ್ತೆ’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ. ಈ ಸಂಚಿಕೆ ಜನವರಿ 17ರಂದು ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ ಚಾನೆಲ್​ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More