AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೊಡ್ಡಪ್ಪನ ಮಾತಿಗೆ ಕಟ್ಟುಬಿದ್ದು ತಾಳಿ ಕಟ್ಟಿದೆ’; ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್

‘ದೊಡ್ಡಪ್ಪನ ಮಾತಿಗೆ ಕಟ್ಟುಬಿದ್ದು ತಾಳಿ ಕಟ್ಟಿದೆ’; ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್

ರಾಜೇಶ್ ದುಗ್ಗುಮನೆ
|

Updated on:Nov 30, 2023 | 8:44 AM

Share

ವರ್ತೂರು ಸಂತೋಷ್ ಅವರ ಮದುವೆ ವಿಚಾರ ಸಾಕಷ್ಟು ಚರ್ಚೆ ಆಗಿದೆ. ಬಿಗ್ ಬಾಸ್​ಗೆ ರೀ ಎಂಟ್ರಿ ಪಡೆಯುತ್ತಿದ್ದಂತೆ ಸಂತೋಷ್ ವಿವಾಹ ವಿಚಾರ ಮುನ್ನೆಲೆಗೆ ಬಂತು. ಈ ಬಗ್ಗೆ ಸಂತೋಷ್ ಅವರು ಓಪನ್ ಆಗಿ ಮಾತನಾಡಿದ್ದಾರೆ.

‘ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ (Varthur Santosh) ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರ ಮೇಲೆ ಹುಲಿ ಉಗುರು ಹೊಂದಿರುವ ಆರೋಪ ಬಂತು. ಅವರನ್ನು ಬಂಧಿಸಲಾಯಿತು. ಆ ಬಳಿಕ ಅವರು ದೊಡ್ಮನೆಗೆ ಮರಳಿದ್ದಾರೆ. ಬಿಗ್ ಬಾಸ್​ಗೆ ರೀ ಎಂಟ್ರಿ ಪಡೆಯುತ್ತಿದ್ದಂತೆ ಸಂತೋಷ್ ಮದುವೆ ಆಗಿದ್ದ ವಿಚಾರ ಚರ್ಚೆಗೆ ಬಂತು. ದೊಡ್ಮನೆಯಲ್ಲಿ ಸಂತೋಷ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ದೊಡ್ಡಪ್ಪ ತೋರಿಸಿದ ಹುಡುಗಿಗೆ ತಾಳಿ ಕಟ್ಟುತ್ತೇನೆ ಎಂದೆ. ಅದರಂತೆ ನಡೆದುಕೊಂಡೆ. ಮದುವೆ ಆದ ಹುಡುಗಿ ನನ್ನ ತಾಯಿಯನ್ನು ಕಡೆಗಣಿಸಲು ಆರಂಭಿಸಿದರು. ಹೀಗಾಗಿ, ನಾನು ಪತ್ನಿಯಿಂದ ದೂರ ಆದೆ’ ಎಂದಿದ್ದಾರೆ ಸಂತೋಷ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Nov 30, 2023 08:43 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More