ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ಎದುರು ದೀಪ ಹಚ್ಚಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ

Updated on: Dec 12, 2023 | 10:20 AM

ಡಿಸೆಂಬರ್ 11 ಕಾರ್ತಿಕ ಮಾಸದ ಕಡೆಯ ಸೋಮವಾರ ಆಗಿತ್ತು. ಈ ಪ್ರಯುಕ್ತ ನಡೆದ ದೀಪೋತ್ಸವದ ಅಂಗವಾಗಿ ವಸಿಷ್ಠ ಸಿಂಹ-ಹರಿಪ್ರಿಯಾ ಇಲ್ಲಿಗೆ ಭೇಟಿ ನೀಡಿದರು.

ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ (Hariprriya) ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಸುತ್ತಾಟ ನಡೆಸುವ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಈ ದಂಪತಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಹೊಳೆ ಆಂಜನೇಯ ಸ್ವಾಮಿ ದೇವರ ದರ್ಶನ ಪಡೆದಿದ್ದಾರೆ. ಡಿಸೆಂಬರ್ 11 ಕಾರ್ತಿಕ ಮಾಸದ ಕಡೆಯ ಸೋಮವಾರ ಆಗಿತ್ತು. ಈ ಪ್ರಯುಕ್ತ ನಡೆದ ದೀಪೋತ್ಸವದ ಅಂಗವಾಗಿ ವಸಿಷ್ಠ ಸಿಂಹ-ಹರಿಪ್ರಿಯಾ ಇಲ್ಲಿಗೆ ಭೇಟಿ ನೀಡಿದರು. ಈ ವೇಳೆ ದೀಪ ಹಚ್ಚಿ ದಂಪತಿ ಆಂಜನೇಯಸ್ವಾಮಿ‌ ದರ್ಶನ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More