Karnataka Assembly Polls: ಚಾಮರಾಜನಗರ ಕ್ಷೇತ್ರದಲ್ಲಿ ರಾತ್ರಿ ಮೂರು ಗಂಟೆಯವರೆಗೆ ದುಡ್ಡು ಹಂಚಿದ ವಿ ಸೋಮಣ್ಣರನ್ನು ಅನರ್ಹಗೊಳಿಸಬೇಕು: ವಾಟಾಳ್ ನಾಗರಾಜ್

ತಾನು ಆರಂಭದಿಂದಲೂ ಹೋರಾಟ ಮಾಡಿಕೊಡು ಬಂದಿರುವುದಾಗಿ ಹೇಳಿದ ನಾಗರಾಜ್ ಕರ್ನಾಟಕದಲ್ಲಿ ಒಬ್ಬ ಹೋರಾಟಗಾರನೆಂದು ಗುರುತಿಸಿಕೊಂಡಿರುವುದಾಗಿ ಹೇಳಿದರು

ಮೈಸೂರು: ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ ಮತ್ತು ಚಾಮರಾಜನಗರದ (Chamarajanagar) ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ (Vatal Nagaraj) ತಮ್ಮ ಪ್ರತಿಸ್ಪರ್ಧಿ ವಿ ಸೋಮಣ್ಣ (V Somanna) ವಿರುದ್ಧ ಕಿಡಿಕಾರಿದ್ದಾರೆ. ಸೋಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಇಬ್ಬರೂ ಚಾಮರಾಜನಗರದಲ್ಲಿ ಮತದಾನದ ಹಿಂದಿನ ದಿನ ಬೆಳಗಿನ ಜಾವ ಮೂರು ಗಂಟೆಯವರೆಗೂ ದುಡ್ಡು ಹಂಚಿದ್ದಾರೆ, ಹಾಗಾಗಿ ಅವರಿಬ್ಬರ ಅಭ್ಯರ್ಥಿತ್ವವನ್ನು ಅನರ್ಹಗೊಳಿಸಬೇಕು ಎಂದು ವಾಟಾಳ್ ನಾಗರಾಜ್ ಹೇಳಿದರು. ತಾನು ಆರಂಭದಿಂದಲೂ ಹೋರಾಟ ಮಾಡಿಕೊಡು ಬಂದಿರುವುದಾಗಿ ಹೇಳಿದ ನಾಗರಾಜ್ ಕರ್ನಾಟಕದಲ್ಲಿ ಒಬ್ಬ ಹೋರಾಟಗಾರನೆಂದು ಗುರುತಿಸಿಕೊಂಡಿರುವುದಾಗಿ ಹೇಳಿದರು. ತಾನು ಈ ಚುನಾವಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ನಾಗರಾಜ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us