ವೀರಪ್ಪ ಮೊಯ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಪ್ರತಿಕ್ರಿಸುವುದು ನನಗಿಷ್ಟವಿಲ್ಲ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 03, 2025 | 1:54 PM

ಕರ್ನಾಟಕ ಪ್ರದೇಶ ಕಮಿಟಿಯ ಅಧ್ಯಕ್ಷರಾಗಿರುವ ಶಿವಕುಮಾರ್ ಅವರಿಗೆ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಎಚ್ಚರಿಕೆ ಅನ್ವಯಿಸುವುದಾದರೆ, ಬೇರೆಯವರು ಎಐಸಿಸಿ ಅಧ್ಯಕ್ಷನ ಆದೇಶವನ್ನು ಬದಿಗೊತ್ತಿ ಸುಖಾಸುಮ್ಮನೆ ಹೇಳಿಕೆಗಳನ್ನು ನೀಡುವ ಮೂಲಕ ಯಾಕೆ ಗೊಂದಲ ಸೃಷ್ಟಿಸುತ್ತಿದ್ದಾರೋ? ಎರಡು ದಿನ ಸುಮ್ಮನಿದ್ದಂತೆ ಮಾಡುವ ಕೆಎನ್ ರಾಜಣ್ಣ ಮೂರನೇ ಪುನಃ ಶುರುವಿಟ್ಟುಕೊಳ್ಳುತ್ತಾರೆ!

ಬೆಂಗಳೂರು, ಮಾರ್ಚ್ 03: ವಿಧಾನಸಭೆಯ ಆವರಣದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿರುವುದನ್ನು ತಿಳಿಸಿದಾಗ ಅವರು ನಿರುದ್ವಿಗ್ನರಾಗಿ ಮತ್ತು ಸಮಾಧಾನ ಚಿತ್ತದಿಂದ, ಮೊಯ್ಲಿ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ, ಅವರು ಹೇಳಿರುವುದಕ್ಕೆ ತಾನು ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಲ್ಲ, ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಯಾರೂ ಮಾತಾಡಬಾರದು ಅಂತ ಹೇಳಿದ್ದಾರೆ, ಅವರು ಹೇಳಿರುವುದನ್ನು ಪಾಲನೆ ಮಾಡುತ್ತಿದ್ದೇನೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿ.ಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ; ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.