ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ

Updated on: Aug 22, 2025 | 7:44 PM

ಬೆಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಸಚಿವರು, ಸರ್ವ ಪಕ್ಷದ ಶಾಸಕರು ಭಾಗಿಯಾಗಿದ್ದು, ಸಭೆಯಲ್ಲಿ ಜಾತಿ ಜನಗಣತಿಗೆ ಸಂಬಂಧಿಸಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಬೆಂಗಳೂರು, (ಆಗಸ್ಟ್ 22): ನಗರದ ಖಾಸಗಿ ಹೊಟೇಲ್ ನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಸಚಿವರು, ಸರ್ವ ಪಕ್ಷದ ಶಾಸಕರು ಭಾಗಿಯಾಗಿದ್ದು, ಸಭೆಯಲ್ಲಿ ಜಾತಿ ಜನಗಣತಿಗೆ ಸಂಬಂಧಿಸಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಪಕ್ಷದ ಒಟ್ಟೂ 54ಕ್ಕೂ ಹೆಚ್ಚು ಮಂದಿ ವೀರಶೈವ ಲಿಂಗಾಯತ ಶಾಸಕರು ಉಪಸ್ಥಿತಿತರಿದ್ದರು. ಇನ್ನು ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು ಎನ್ನುವ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More