ಸಚಿವನ ಹನಿ ಟ್ರ್ಯಾಪ್ ಆರೋಪಗಳಲ್ಲಿ ಎಷ್ಟು ಹುರುಳಿದೆ ಅನ್ನೋದು ಸಿಬಿಐ ತನಿಖೆ ಮೂಲಕ ಗೊತ್ತಾಗಬೇಕು: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 24, 2025 | 1:51 PM

ಹಿರಿಯ ಸಚಿವರೊಬ್ಬರು ಸದನದಲ್ಲಿ ಹನಿ ಟ್ರ್ಯಾಪ್ ಪ್ರಯತ್ನ ನಡೆದಿರುವುದನ್ನು ಪ್ರಸ್ತಾಪಿಸಿ ಸಚಿವನಾದ ತನಗೆ ರಕ್ಷಣೆ ಇಲ್ಲವೆಂದಿದ್ದಾರೆ, ಅವರು ಯಾರ ಹೆಸರನ್ನೂ ಹೇಳಿಲ್ಲವಾದರೂ ಮತ್ತೊಬ್ಬ ಹಿರಿಯ ಸಚಿವ ಶಾಮೀಲಾಗಿರುವುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಅದರಲ್ಲಿ ಯಾರೇ ಭಾಗಿಯಾಗಿರಲಿ, ತನಿಖೆ ನಡೆಯಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ರವಿ ಹೇಳಿದರು.

ಚಿಕ್ಕಮಗಳೂರು, ಮಾರ್ಚ್ 24: ಹನಿ ಟ್ರ್ಯಾಪ್ (honey trap) ಪ್ರಯತ್ನ ನಡೆದಿದೆ ಅಂತ ಹಿರಿಯ ಸಚಿವರೊಬ್ಬರು ಹೇಳಿದ್ದು ರಾಜ್ಯದೆಲ್ಲೆಡೆ ಚರ್ಚೆಯಾಗುತ್ತಿದೆ, 48 ಜನ ಶಾಸಕರು, ಮಂತ್ರಿಗಳು ನ್ಯಾಯಾಧೀಶರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ, ಈ ಆರೋಪಗಳಲ್ಲಿ ಎಷ್ಟು ಸತ್ಯಾಂಶವಿದೆ, ಎಷ್ಟು ಉತ್ಪ್ರೇಕ್ಷೆ ಇದೆ ಅಂತ ಗೊತ್ತಾಗಬೇಕು ಎಂದು ಬಿಜೆಪಿ ಎಂಎಲ್​ಸಿ ಸಿಟಿ ರವಿ ಹೇಳಿದರು. ಉನ್ನತಮಟ್ಟದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ, ಉನ್ನತಮಟ್ಟದ ತನಿಖೆಗಿಂತ ನ್ಯಾಯಾಂಗ ಇಲ್ಲವೇ ಸಿಬಿಐ ತನಿಖೆಯಾಗಬೇಕು ಎಂದು ತಾನು ಹೇಳಿರುವುದಾಗಿ ರವಿ ಚಿಕ್ಕಮಗಳೂರಲ್ಲಿ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹನಿಟ್ರ್ಯಾಪ್​​ ಕೋಲಾಹಲ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿಯಾದ ಖರ್ಗೆ, ಮಹತ್ವದ ಚರ್ಚೆ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.