SK Bhagavan: ಕನ್ನಡದಲ್ಲಿ ಮೊಟ್ಟಮೊದಲ ಬಾಂಡ್ ಶೈಲಿ ಸಿನಿಮಾ ತಯಾರಿಸಿದ ದೊರೆ-ಭಗವಾನ್ ಜೋಡಿಯ ಭಗವಾನ್ ಇನ್ನಿಲ್ಲ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Feb 20, 2023 | 10:57 AM

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಗವಾನ್ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ 6 ಗಂಟಗೆ ಅವರು ಕೊನೆಯುಸಿರೆಳೆದರು.

ಬೆಂಗಳೂರು: ಕರ್ನಾಟಕ ಖ್ಯಾತ ನಿರ್ದೇಶಕ ಮತ್ತು ದಿವಂಗತ ಡಾ ರಾಜ್ ಕುಮಾರ್ ಕುಟುಂಬದ ಅತ್ಯಂತ ಆಪ್ತರಾಗಿದ್ದ ಎಸ್ ಕೆ ಭಗವಾನ್ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ಅವರಿಗೆ 90-ವರ್ಷ ವಯಸ್ಸಾಗಿತ್ತು. ಬಿ ದೊರೈರಾಜ್ ಮತ್ತು ಭಗವಾನ್ ಜೋಡಿ ಹಲವಾರು ಜನಪ್ರಿಯ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದೆ. ಕನ್ನಡದಲ್ಲಿ ಮೊಟ್ಟ ಮೊದಲ ಬಾಂಡ್ ಶೈಲಿಯ ಸಿನಿಮಾ (ಜೇಡರ ಬಲೆ, 1968, ಖ್ಯಾತ ಹಿಂದಿ ನಟಿ ರೇಖಾ ಅವರು ಡಾ ರಾಜ್ ನಾಯಕಿಯಾಗಿದ್ದರು) ತಯಾರಿಸಿದ ಶ್ರೇಯಸ್ಸು ದೊರೆ-ಭಗವಾನ್ ಗೆ ಸಲ್ಲುತ್ತದೆ. ದೊರೈರಾಜ್ 2000ರಲ್ಲಿ ವಿಧಿವಶರಾದರು. ಪುನೀತ್ ರಾಜಕುಮಾರ್ 2021ರಲ್ಲಿ ಆಕಸ್ಮಿಕವಾಗಿ ನಿಧನರಾದಾಗ ಭಗವಾನ್ ಆರೋಗ್ಯವಾಗಿದ್ದರು ಮತ್ತು ಅಪ್ಪು ಅಂತ್ಯ ಸಂಸ್ಕಾರನ್ನು ತಾವೇ ಮುಂದೆ ನಿಂತು ನೆರವೇರಿಸಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಗವಾನ್ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ 6 ಗಂಟಗೆ ಅವರು ಕೊನೆಯುಸಿರೆಳೆದರು. ಸಹಕಾರನಗರದಲ್ಲಿರುವ ಮೃತರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published on: Feb 20, 2023 10:53 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.