ಕೊಪ್ಪಳ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಯೋಧ್ಯೆ ಶ್ರೀರಾಮ ಮಂತ್ರಾಕ್ಷತೆ ನೀಡಿದ ವಿಹೆಚ್​​ಪಿ

Edited By: ವಿವೇಕ ಬಿರಾದಾರ

Updated on: Jan 06, 2024 | 9:55 AM

ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ವಿಶ್ವ ಹಿಂದು ಪರಿಷತ್ ಸಂಘಟನೆ ಕಾರ್ಯಕರ್ತರು ಅಯೋಧ್ಯೆ ಶ್ರೀರಾಮ ಮಂತ್ರಾಕ್ಷತೆ ನೀಡಿದರು. ಜನೆವರಿ 22 ರಂದು ಅಯೋದ್ಯೆ ರಾಮಮಂದಿರ ಉದ್ಘಾಟನೆ ಮತ್ತು ಬಾಲ ರಾಮನ ಪ್ರತಿಷ್ಠಾಪಿಸಲಾಗುತ್ತದೆ. ಹೀಗಾಗಿ ಅಯೋಧ್ಯೆಯಿಂದ ಮಂತ್ರಾಕ್ಷತೆ ದೇಶದ ಎಲ್ಲ ರಾಜ್ಯಗಳಿಗೆ ತಲುಪಿವೆ.

ಕೊಪ್ಪಳ, ಜನವರಿ 05: ಗವಿಸಿದ್ದೇಶ್ವರ (Gavisiddeshwar) ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ (Abhinav Gavisiddeshwar Swamiji) ವಿಶ್ವ ಹಿಂದು ಪರಿಷತ್ (VHP) ಸಂಘಟನೆ ಕಾರ್ಯಕರ್ತರು ಅಯೋಧ್ಯೆ (Ayodhye) ಶ್ರೀರಾಮ ಮಂತ್ರಾಕ್ಷತೆ ನೀಡಿದರು. ಜನೆವರಿ 22 ರಂದು ಅಯೋದ್ಯೆ ರಾಮಮಂದಿರ ಉದ್ಘಾಟನೆ ಮತ್ತು ಬಾಲ ರಾಮನ ಪ್ರತಿಷ್ಠಾಪಿಸಲಾಗುತ್ತದೆ. ಹೀಗಾಗಿ ಅಯೋಧ್ಯೆಯಿಂದ ಮಂತ್ರಾಕ್ಷತೆ ದೇಶದ ಎಲ್ಲ ರಾಜ್ಯಗಳಿಗೆ ತಲುಪಿವೆ. ಈ ಮಂತ್ರಾಕ್ಷತೆಗಳನ್ನು ಹಿಂದೂ ಸಂಘಟನೆಗಳು ದೇಶಾದ್ಯಂತ ವಿತರಣೆ ಮಾಡುತ್ತಿವೆ. ಹಿಂದೂ ಸಂಘಟನೆಗಳು ಮನೆ ಮನೆಗೂ ತೆರಳಿ ಮಂತ್ರಾಕ್ಷತೆಯನ್ನು ನೀಡುತ್ತಿವೆ.

Follow Us
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More