Video: ಪ್ರಧಾನಿ ಮೋದಿ, ಎನ್ಡಿಎ ನಾಯಕರ ಸಮ್ಮುಖದಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ಇಂದು ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಎನ್ಡಿಎ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ನಾಮಪತ್ರವನ್ನು ನಾಲ್ಕು ಸೆಟ್ಗಳಲ್ಲಿ ಸಲ್ಲಿಸಲಾಗಿದ್ದು, ಪ್ರತಿ ಸೆಟ್ನಲ್ಲಿ 20 ಪ್ರಸ್ತಾವಕರು ಮತ್ತು 20 ಅನುಮೋದಕರು ಸಹಿ ಹಾಕಿದ್ದಾರೆ. ಪ್ರಧಾನಿ ಮೋದಿ ಜೊತೆಗೆ, ಕೇಂದ್ರ ಸಚಿವರು, ಹಿರಿಯ ಸಂಸದರು ಮತ್ತು ಪ್ರಮುಖ ಮೈತ್ರಿಕೂಟದ ನಾಯಕರ ಹೆಸರನ್ನು ದಾಖಲೆಗಳಲ್ಲಿ ಹೆಸರಿಸಲಾಗಿದೆ.ಸೆಪ್ಟೆಂಬರ್ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ನವದೆಹಲಿ, ಆಗಸ್ಟ್ 20: ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ಇಂದು ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಎನ್ಡಿಎ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ಟೆಂಬರ್ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ನಾಮಪತ್ರವನ್ನು ನಾಲ್ಕು ಸೆಟ್ಗಳಲ್ಲಿ ಸಲ್ಲಿಸಲಾಗಿದೆ. ಮೋದಿ ಜೊತೆಗೆ, ಕೇಂದ್ರ ಸಚಿವರು, ಹಿರಿಯ ಸಂಸದರು ಮತ್ತು ಪ್ರಮುಖ ಮೈತ್ರಿಕೂಟದ ನಾಯಕರ ಹೆಸರನ್ನು ದಾಖಲೆಗಳಲ್ಲಿ ಹೆಸರಿಸಲಾಗಿದೆ. ಸೆ
ಸಿ.ಪಿ. ರಾಧಾಕೃಷ್ಣನ್ ಮತ್ತು ಪ್ರಧಾನಿ ಮೋದಿ ಅವರೊಂದಿಗೆ ಸಂಸತ್ ಭವನದಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಹಲವಾರು ಹಿರಿಯ ಎನ್ಡಿಎ ಮಿತ್ರಪಕ್ಷಗಳು ಮತ್ತು ಕೇಂದ್ರ ಸಚಿವರು ಇದ್ದರು.
ಜನತಾದಳ ಯುನೈಟೆಡ್ನಿಂದ ಲಾಲನ್ ಸಿಂಗ್, ಜೆಡಿಎಸ್ನಿಂದ ಎಚ್ಡಿ ಕುಮಾರಸ್ವಾಮಿ, ಎಐಎಡಿಎಂಕೆಯಿಂದ ಎಂ. ತಂಬಿ ದುರೈ, ಹಿಂದೂಸ್ತಾನಿ ಅವಾಮ್ ಮೋರ್ಚಾದಿಂದ ಜಿತನ್ ರಾಮ್ ಮಾಂಝಿ, ಲೋಕ ಜನಶಕ್ತಿ ಪಕ್ಷದಿಂದ (ರಾಮ್ ವಿಲಾಸ್) ಚಿರಾಗ್ ಪಾಸ್ವಾನ್, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದಿಂದ ಪ್ರಫುಲ್ ಪಟೇಲ್ ಮತ್ತು ಅಸ್ಸೋಂ ಗಣ ಪರಿಷತ್ನಿಂದ ಬೀರೇಂದ್ರ ಪ್ರಸಾದ್ ಬೈಶ್ಯ ಇದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ