Video: ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟ 5 ಕಾಡಾನೆಗಳು: ಕಬ್ಬು ಸೇರಿ ವಿವಿಧ ಬೆಳೆಗಳು ನಾಶ

Edited By:

Updated on: Oct 01, 2023 | 4:21 PM

Mandya News: ಐದು ಕಾಡಾನೆಗಳ ಹಿಂಡು ಕಾಡಿನಿಂದ ನಾಡಿಗೆ ಬಂದಿವೆ. ಮಂಡ್ಯ ತಾಲೂಕಿನ ಹಳೇ ಬೂದನೂರು ಕಬ್ಬಿನ ಗದ್ದೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿ ಇರುವ ಜಮೀನಿಗೆ ಕಾಡಾನೆಗಳು ನುಗ್ಗಿದ್ದು, ಕಬ್ಬು ಸೇರಿ ವಿವಿಧ ಬೆಳೆಗಳು ಹಾನಿ ಆಗಿವೆ.

ಮಂಡ್ಯ, ಅಕ್ಟೋಬರ್​ 01: ಐದು ಕಾಡಾನೆಗಳ (elephants) ಹಿಂಡು ಕಾಡಿನಿಂದ ನಾಡಿಗೆ ಬಂದಿವೆ. ಮಂಡ್ಯ ತಾಲೂಕಿನ ಹಳೇ ಬೂದನೂರು ಕಬ್ಬಿನ ಗದ್ದೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿ ಇರುವ ಜಮೀನಿಗೆ ಕಾಡಾನೆಗಳು ನುಗ್ಗಿದ್ದು, ಕಬ್ಬು ಸೇರಿ ವಿವಿಧ ಬೆಳೆಗಳು ಹಾನಿ ಆಗಿವೆ. ಬೆಂಗಳೂರು-ಮೈಸೂರು ಹೆದ್ದಾರಿಗೂ ಕಾಡಾನೆಗಳು ಸಮೀಪದಲ್ಲಿದ್ದು, ಹೆದ್ದಾರಿ ಮತ್ತು ನಗರಕ್ಕೆ ಬಾರದಂತೆ ಅರಣ್ಯ ಇಲಾಖೆ ಸಿಬ್ಬಂದಿ ನಿಯಂತ್ರಿಸುತ್ತಿದ್ದಾರೆ. ಕಾಡಾನೆಗಳ ನೋಡಲು ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us