Video: ನೀರಿನೊಂದಿಗೆ ಮನೆಯೊಳಗೆ ನುಗ್ಗಿದ ದೈತ್ಯ ಹೆಬ್ಬಾವು
ಪ್ರವಾಹದಿಂದ ಮನೆಯೊಂದರೊಳಗೆ ನೀರಿನೊಂದಿಗೆ ದೈತ್ಯ ಆಕಾರದ ಹೆಬ್ಬಾವೊಂದು ಬಂದಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ
ಹೈದರಾಬಾದ್,ಜು.28: ದೇಶದ ಅನೇಕ ಕಡೆ ಭಾರೀ ಮಳೆಯಾಗುತ್ತಿದ್ದು, ಇದೀಗ ತೆಲಂಗಾಣದ (Telangana) ಹಲವು ಭಾಗಗಳಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಇಲ್ಲಿನ ಕೆಲವೊಂದು ಕಡೆ ಪ್ರವಾಹ ಉಂಟಾಗಿದ್ದು, ಈ ಪ್ರವಾಹದಲ್ಲಿ ಮೋಟರ್ಬೈಕ್ ಕೊಚ್ಚಿಕೊಂಡು ಹೋಗಿದೆ. ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಇನ್ನೂ ಪ್ರವಾಹದಿಂದ ಮನೆಯೊಂದರೊಳಗೆ ನೀರಿನೊಂದಿಗೆ ದೈತ್ಯ ಆಕಾರದ ಹೆಬ್ಬಾವೊಂದು ಬಂದಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರೊಂದಿಗೆ ಸೇರಿ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಇದೀಗ ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮನೆಯಲ್ಲಿದ್ದ ಬೃಹತ್ ಆಕಾರ ಹೆಬ್ಬಾವನ್ನು ಹೊರಗೆ ತೆರೆಯವುದನ್ನು ನೋಡಬಹುದು. ಇಂತಹದೇ ಮತ್ತೊಂದು ಘಟನೆ ತೆಲಂಗಾಣದ ಪ್ರಕಾಶ್ ನಗರ ಪ್ರದೇಶದಲ್ಲಿ ನಡೆದಿದೆ. ಸುರಿಯುತ್ತಿದ್ದ ಭಾರೀ ಮಳೆಯಿಂದ ತಪ್ಪಿಸಿಕೊಳ್ಳಲು ಕಾಡಾನೆಯೊಂದು ಮನೆಯೊಳಗೆ ನುಗ್ಗಿದೆ. ಈ ವಿಡಿಯೋ ಕೂಡ ಭಾರೀ ವೈರಲ್ ಆಗಿತ್ತು.
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

