Video: ನೀರಿನೊಂದಿಗೆ ಮನೆಯೊಳಗೆ ನುಗ್ಗಿದ ದೈತ್ಯ ಹೆಬ್ಬಾವು

Updated on: Jul 28, 2023 | 3:49 PM

ಪ್ರವಾಹದಿಂದ ಮನೆಯೊಂದರೊಳಗೆ ನೀರಿನೊಂದಿಗೆ ದೈತ್ಯ ಆಕಾರದ ಹೆಬ್ಬಾವೊಂದು ಬಂದಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ

ಹೈದರಾಬಾದ್,ಜು.28: ದೇಶದ ಅನೇಕ ಕಡೆ ಭಾರೀ ಮಳೆಯಾಗುತ್ತಿದ್ದು, ಇದೀಗ ತೆಲಂಗಾಣ(Telangana) ಹಲವು ಭಾಗಗಳಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಇಲ್ಲಿನ ಕೆಲವೊಂದು ಕಡೆ ಪ್ರವಾಹ ಉಂಟಾಗಿದ್ದು, ಈ ಪ್ರವಾಹದಲ್ಲಿ ಮೋಟರ್‌ಬೈಕ್‌ ಕೊಚ್ಚಿಕೊಂಡು ಹೋಗಿದೆ. ಹತ್ತಾರು ಮನೆಗಳಿಗೆ ನೀರು ನುಗ್ಗಿದೆ.  ಇನ್ನೂ ಪ್ರವಾಹದಿಂದ ಮನೆಯೊಂದರೊಳಗೆ ನೀರಿನೊಂದಿಗೆ ದೈತ್ಯ ಆಕಾರದ ಹೆಬ್ಬಾವೊಂದು ಬಂದಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರೊಂದಿಗೆ ಸೇರಿ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಇದೀಗ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಮನೆಯಲ್ಲಿದ್ದ ಬೃಹತ್ ಆಕಾರ ಹೆಬ್ಬಾವನ್ನು ಹೊರಗೆ ತೆರೆಯವುದನ್ನು ನೋಡಬಹುದು. ಇಂತಹದೇ ಮತ್ತೊಂದು ಘಟನೆ ತೆಲಂಗಾಣದ ಪ್ರಕಾಶ್ ನಗರ ಪ್ರದೇಶದಲ್ಲಿ ನಡೆದಿದೆ. ಸುರಿಯುತ್ತಿದ್ದ ಭಾರೀ ಮಳೆಯಿಂದ ತಪ್ಪಿಸಿಕೊಳ್ಳಲು ಕಾಡಾನೆಯೊಂದು ಮನೆಯೊಳಗೆ ನುಗ್ಗಿದೆ. ಈ ವಿಡಿಯೋ ಕೂಡ ಭಾರೀ ವೈರಲ್ ಆಗಿತ್ತು. ​​

Published on: Jul 28, 2023 03:42 PM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More