Video: ಕಾಂಗ್ರೆಸ್ ಪ್ರತಿಭಟನೆ ವೇಳೆ ಜೇನು ನೊಣಗಳ ದಾಳಿ, ದಿಕ್ಕಾಪಾಲಾಗಿ ಓಡಿದ ಪ್ರತಿಭಟನಾಕಾರರು
ಕಾಂಗ್ರೆಸ್ ಪ್ರತಿಭಟನೆ ವೇಳೆ ಜೇನು ನೊಣಗಳು ದಾಳಿ ಮಾಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಜೇನು ಕಚ್ಚಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ದಿಕ್ಕಾಪಾಲಾಗಿ ಓಡಿದ್ದಾರೆ. 10 ಲಕ್ಷ ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಬಿಷ್ಣುಪಾದ ಸೇಥಿ ಅವರನ್ನು ಬಂಧಿಸುವಂತೆ ಒಡಿಶಾ ಛಾತ್ರ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ನ ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನಾಕಾರರು, ಪೊಲೀಸ್ ಸಿಬ್ಬಂದಿ ಮತ್ತು ಪತ್ರಕರ್ತರು ಪರದಾಡುವಂತಾಯಿತು.
ಕಾಂಗ್ರೆಸ್ ಪ್ರತಿಭಟನೆ ವೇಳೆ ಜೇನು ನೊಣಗಳು ದಾಳಿ ಮಾಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಜೇನು ಕಚ್ಚಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ದಿಕ್ಕಾಪಾಲಾಗಿ ಓಡಿದ್ದಾರೆ. 10 ಲಕ್ಷ ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಬಿಷ್ಣುಪಾದ ಸೇಥಿ ಅವರನ್ನು ಬಂಧಿಸುವಂತೆ ಒಡಿಶಾ ಛಾತ್ರ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ನ ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನಾಕಾರರು, ಪೊಲೀಸ್ ಸಿಬ್ಬಂದಿ ಮತ್ತು ಪತ್ರಕರ್ತರು ಪರದಾಡುವಂತಾಯಿತು.
ಗೊಂದಲದ ನಂತರ, ಪ್ರತಿಭಟನಾಕಾರರು ಮತ್ತೆ ಗುಂಪುಗೂಡಿದರು ಮತ್ತು ತಮ್ಮ ಪ್ರತಿಭಟನೆ ಪುನರಾರಂಭಿಸಿದರು, ಸೇಥಿಯ ತಕ್ಷಣದ ಬಂಧನಕ್ಕೆ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು. ಕೆಲವು ಪ್ರತಿಭಟನಾಕಾರರು ಸೇಥಿ ಅವರ ನಿವಾಸದ ಸುತ್ತಲಿನ ಭದ್ರತಾ ಅಡೆತಡೆಗಳನ್ನು ತಳ್ಳಿ ಮುಂದೆ ಹೋಗಲು ಪ್ರಯತ್ನಿಸಿದರು, ಇದು ಪೊಲೀಸರೊಂದಿಗೆ ಘರ್ಷಣೆಗೆ ಕಾರಣವಾಯಿತು ಮತ್ತು ಹಲವಾರು ಜನರನ್ನು ಬಂಧಿಸಲಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

