Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

Updated on: Jan 08, 2025 | 2:18 PM

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಉತ್ಸವದ ವೇಳೆ ಆನೆಯೊಂದು ಕೆರಳಿದ ಪರಿಣಾಮ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ ನೂರಾರು ಮಂದಿ ನೆರೆದಿದ್ದರು. ಈ ಉತ್ಸವದಲ್ಲಿ ಐದು ಆನೆಗಳನ್ನು ಅಲಂಕರಿಸಲಾಗಿತ್ತು. ಗುಂಪಿನಲ್ಲಿದ್ದವರು ವಿಡಿಯೋ ಮಾಡಿಕೊಳ್ಳುತ್ತಿದ್ದರು, ಕೆಲವರು ಫೋಟೊ ತೆಗೆಯುತ್ತಿದ್ದರು. ಹಠಾತ್ತನೆ ಮಧ್ಯೆ ಇದ್ದ ಆನೆಯೊಂದು ಕೆರಳಿ ಜನರ ಕಡೆ ಧಾವಿಸಿ ಬಂದಿತ್ತು, ಮಾವುತ ಎಷ್ಟೇ ಕಷ್ಟಪಟ್ಟರು ನಿಯಂತ್ರಿಸಲು ಸಾಧ್ಯವಾಗಲಿಲ್ಲ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಉತ್ಸವದ ವೇಳೆ ಆನೆಯೊಂದು ಕೆರಳಿದ ಪರಿಣಾಮ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ ನೂರಾರು ಮಂದಿ ನೆರೆದಿದ್ದರು. ಈ ಉತ್ಸವದಲ್ಲಿ ಐದು ಆನೆಗಳನ್ನು ಅಲಂಕರಿಸಲಾಗಿತ್ತು. ಗುಂಪಿನಲ್ಲಿದ್ದವರು ವಿಡಿಯೋ ಮಾಡಿಕೊಳ್ಳುತ್ತಿದ್ದರು, ಕೆಲವರು ಫೋಟೊ ತೆಗೆಯುತ್ತಿದ್ದರು. ಹಠಾತ್ತನೆ ಮಧ್ಯೆ ಇದ್ದ ಆನೆಯೊಂದು ಕೆರಳಿ ಜನರ ಕಡೆ ಧಾವಿಸಿ ಬಂದಿತ್ತು, ಮಾವುತ ಎಷ್ಟೇ ಕಷ್ಟಪಟ್ಟರು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಓರ್ವ ವ್ಯಕ್ತಿಯನ್ನು ಸೊಂಡಿಲಿನಲ್ಲಿ ಎತ್ತಿ ಎಸೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕೋಟಕ್ಕಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More