Video: ಅರಳು ಹುರಿದಂತೆ 9 ಭಾಷೆಯಲ್ಲಿ ಮಾತನಾಡುವ ಸರ್ಕಾರಿ ಶಾಲೆ ವಿದ್ಯಾರ್ಥಿನಿ: ಪುಟ್ಟ ಬಾಲಕಿಯ ಭಾಷಾ ಪ್ರಾವೀಣ್ಯತೆಗೆ ಎಲ್ಲರ ಮೆಚ್ಚುಗೆ

Edited By:

Updated on: Aug 16, 2023 | 8:00 PM

Bagalkote News: ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಗುರುಲಿಂಗಪ್ಪ ಕಾಲೊನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಮಾತೃಭಾಷೆ ಜತೆಗೆ ವಿವಿಧ ಭಾಷೆಗಳನ್ನು ಮಾತನಾಡುತ್ತಾಳೆ. ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಮಲೆಯಾಳಿ, ಉರ್ದು,ಲಂಬಾಣಿ ಮತ್ತು ಮರಾಠಿ ಭಾಷೆಯಲ್ಲಿ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾಳೆ.

ಬಾಗಲಕೋಟೆ, ಆಗಸ್ಟ್ 16: ಒಂದೇ ಭಾಷೆ (languages) ಮಾತನಾಡಲು ಪರದಾಡುವ ಇಂದಿನ ದಿನಗಳಲ್ಲಿ ಪುಟ್ಟ ಬಾಲಕಿಯೊಬ್ಬಳು ದೇಶದ ಬೇರೆ ಬೇರೆ ರಾಜ್ಯದ ಭಾಷೆಗಳಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾಳೆ. ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಗುರುಲಿಂಗಪ್ಪ ಕಾಲೊನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಮಾತೃಭಾಷೆ ಜತೆಗೆ ವಿವಿಧ ಭಾಷೆಗಳನ್ನು ಮಾತನಾಡುತ್ತಾಳೆ. ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಮಲೆಯಾಳಿ, ಉರ್ದು, ಲಂಬಾಣಿ ಮತ್ತು ಮರಾಠಿ ಭಾಷೆಯಲ್ಲಿ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾಳೆ. ನಲಿ ಕಲಿ ವಿಭಾಗದಲ್ಲಿ ಶಿಕ್ಷಕ ಸಂಗಮೇಶ ಬಂಡರಗಲ್ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಸಾಲನ್ನು ಬಾಲಕಿಯಿಂದ ವಿವಿಧ ಭಾಷೆಗಳಲ್ಲಿ ಕೇಳಿ ಅದನ್ನು ಫೇಸ್‌ಬುಕ್‌ದಲ್ಲಿ ಹರಿಬಿಟ್ಟಿದ್ದು ಸೋಷಿಯಲ್ ಮಿಡಿಯಾದಲ್ಲಿ ಪುಟ್ಟ ಬಾಲಕಿಯ ಭಾಷಾ ಪ್ರಾವೀಣ್ಯತೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Aug 16, 2023 07:47 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More