ಅರೋಪಿ ಪ್ರವೀಣ್ ಚೌಗುಲೆ ಮತ್ತು ಕೊಲೆಯಾದ ಐನಾಜ್ ಏರ್ ಇಂಡಿಯಾವೊಂದರಲ್ಲಿ ಕರ್ತವ್ಯನಿರತರಾಗಿದ್ದ ವಿಡಿಯೋ ವೈರಲ್

ಐನಾಜ್ ತಿರಸ್ಕಾರದಿಂದ ರೊಚ್ಚಿಗೆದ್ದಿದ್ದ ಪ್ರವೀಣ್ ಆಕೆಗೆ ಗತಿಕಾಣಿಸುವ ಉದ್ದೇಶದಿಂದ ಮನೆಹೊಕ್ಕು, ಆಕೆಯನ್ನಲ್ಲದೆ ರಕ್ಷಣೆ ಧಾವಿಸಿದ್ದ ಐನಾಜ್ ತಾಯಿ, ಒಬ್ಬ ಸಹೋದರಿ ಮತ್ತು 12 ವರ್ಷದ ಸಹೋದರನನ್ನು ಚಾಕುವೊಂದರಿಂದ ತಿವಿದು ಹತ್ಯೆ ಮಾಡಿ ಮನೆಯಲ್ಲಿದ್ದ ಅಜ್ಜಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದ.

ಅರೋಪಿ ಪ್ರವೀಣ್ ಚೌಗುಲೆ ಮತ್ತು ಕೊಲೆಯಾದ ಐನಾಜ್ ಏರ್ ಇಂಡಿಯಾವೊಂದರಲ್ಲಿ ಕರ್ತವ್ಯನಿರತರಾಗಿದ್ದ ವಿಡಿಯೋ ವೈರಲ್
|

Updated on: Nov 16, 2023 | 10:56 AM

ಉಡುಪಿ: ರವಿವಾರ ಬೆಳಗ್ಗೆ ನಗರದ ಮಲ್ಪೆ ಪ್ರದೇಶದಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಂದು ಮತ್ತೊಬ್ಬ ಹಿರಿಯ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪದಲ್ಲಿ ಏರ್ ಇಂಡಿಯ ಉದ್ಯೋಗಿ (Air India employee) ಪ್ರವೀಣ್ ಚೌಗುಲೆಯನ್ನು (Praveen Chougule) ಪೊಲೀಸರು ಈಗಾಗಲೇ ಬಂಧಿಸಿದ್ದು ಅವನು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆಯಾದ ನಾಲ್ವರ ಪೈಕಿ 21-ವರ್ಷ ವಯಸ್ಸಿನ ಯುವತಿ ಐನಾಜ್ (Ainaz) ಪ್ರವೀಣ್ ನ ಸಹೋದ್ಯೋಗಿಯಾಗಿದ್ದಳು. ಅವರಿಬ್ಬರು ಫ್ಲೈಟ್ ವೊಂದರಲ್ಲಿ ಇತರ ಸಿಬ್ಬಂದಿಯೊಂದಿಗೆ ಕರ್ತವ್ಯನಿರತರಾಗಿದ್ದ ವಿಡಿಯೋವೊಂದು ಮಾಧ್ಯಮಗಳಿಗೆ ಲಭ್ಯವಾಗಿದ್ದು ಇದು ವೈರಲ್ ಆಗಿದೆ. ಮೂಲಗಳ ಪ್ರಕಾರ ಮದುವೆಯಾಗಿ ಎರಡು ಮಕ್ಕಳ ತಂದೆಯೂ ಆಗಿರುವ 39-ವರ್ಷ ವಯಸ್ಸಿನ ಪ್ರವೀಣ್, ಐನಾಜ್ ಸೌದರ್ಯಕ್ಕೆ ಮನಸೋತು ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆದರೆ ಯುವತಿ ಕ್ಯಾರೇ ಅಂದಿರಲಿಲ್ಲ.

ಐನಾಜ್ ತಿರಸ್ಕಾರದಿಂದ ರೊಚ್ಚಿಗೆದ್ದಿದ್ದ ಪ್ರವೀಣ್ ಆಕೆಗೆ ಗತಿಕಾಣಿಸುವ ಉದ್ದೇಶದಿಂದ ಮನೆಹೊಕ್ಕು, ಆಕೆಯನ್ನಲ್ಲದೆ ರಕ್ಷಣೆ ಧಾವಿಸಿದ್ದ ಐನಾಜ್ ತಾಯಿ, ಒಬ್ಬ ಸಹೋದರಿ ಮತ್ತು 12 ವರ್ಷದ ಸಹೋದರನನ್ನು ಚಾಕುವೊಂದರಿಂದ ತಿವಿದು ಹತ್ಯೆ ಮಾಡಿ ಮನೆಯಲ್ಲಿದ್ದ ಅಜ್ಜಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದ. ಭೀಕರ ಮತ್ತು ಬರ್ಬರ ಅಪರಾಧ ನಡೆಸಿದ ಬಳಿಕ ಪರಾರಿಯಾಗಿದ್ದ ಪ್ರವೀಣ್ ನನ್ನು ಉಡುಪಿ ಪೊಲೀಸರು ಸಾಂಗ್ಲಿಯಲ್ಲಿ ಬಂಧಿಸಿದ್ದರು. ಏರ್ ಇಂಡಿಯ ಕೆಲಸಕ್ಕೆ ಸೇರುವ ಮೊದಲು ಪ್ರವೀಣ್ ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದನಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ