ಅರೋಪಿ ಪ್ರವೀಣ್ ಚೌಗುಲೆ ಮತ್ತು ಕೊಲೆಯಾದ ಐನಾಜ್ ಏರ್ ಇಂಡಿಯಾವೊಂದರಲ್ಲಿ ಕರ್ತವ್ಯನಿರತರಾಗಿದ್ದ ವಿಡಿಯೋ ವೈರಲ್

ಅರೋಪಿ ಪ್ರವೀಣ್ ಚೌಗುಲೆ ಮತ್ತು ಕೊಲೆಯಾದ ಐನಾಜ್ ಏರ್ ಇಂಡಿಯಾವೊಂದರಲ್ಲಿ ಕರ್ತವ್ಯನಿರತರಾಗಿದ್ದ ವಿಡಿಯೋ ವೈರಲ್
|

Updated on: Nov 16, 2023 | 10:56 AM

ಐನಾಜ್ ತಿರಸ್ಕಾರದಿಂದ ರೊಚ್ಚಿಗೆದ್ದಿದ್ದ ಪ್ರವೀಣ್ ಆಕೆಗೆ ಗತಿಕಾಣಿಸುವ ಉದ್ದೇಶದಿಂದ ಮನೆಹೊಕ್ಕು, ಆಕೆಯನ್ನಲ್ಲದೆ ರಕ್ಷಣೆ ಧಾವಿಸಿದ್ದ ಐನಾಜ್ ತಾಯಿ, ಒಬ್ಬ ಸಹೋದರಿ ಮತ್ತು 12 ವರ್ಷದ ಸಹೋದರನನ್ನು ಚಾಕುವೊಂದರಿಂದ ತಿವಿದು ಹತ್ಯೆ ಮಾಡಿ ಮನೆಯಲ್ಲಿದ್ದ ಅಜ್ಜಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದ.

ಉಡುಪಿ: ರವಿವಾರ ಬೆಳಗ್ಗೆ ನಗರದ ಮಲ್ಪೆ ಪ್ರದೇಶದಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಂದು ಮತ್ತೊಬ್ಬ ಹಿರಿಯ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪದಲ್ಲಿ ಏರ್ ಇಂಡಿಯ ಉದ್ಯೋಗಿ (Air India employee) ಪ್ರವೀಣ್ ಚೌಗುಲೆಯನ್ನು (Praveen Chougule) ಪೊಲೀಸರು ಈಗಾಗಲೇ ಬಂಧಿಸಿದ್ದು ಅವನು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆಯಾದ ನಾಲ್ವರ ಪೈಕಿ 21-ವರ್ಷ ವಯಸ್ಸಿನ ಯುವತಿ ಐನಾಜ್ (Ainaz) ಪ್ರವೀಣ್ ನ ಸಹೋದ್ಯೋಗಿಯಾಗಿದ್ದಳು. ಅವರಿಬ್ಬರು ಫ್ಲೈಟ್ ವೊಂದರಲ್ಲಿ ಇತರ ಸಿಬ್ಬಂದಿಯೊಂದಿಗೆ ಕರ್ತವ್ಯನಿರತರಾಗಿದ್ದ ವಿಡಿಯೋವೊಂದು ಮಾಧ್ಯಮಗಳಿಗೆ ಲಭ್ಯವಾಗಿದ್ದು ಇದು ವೈರಲ್ ಆಗಿದೆ. ಮೂಲಗಳ ಪ್ರಕಾರ ಮದುವೆಯಾಗಿ ಎರಡು ಮಕ್ಕಳ ತಂದೆಯೂ ಆಗಿರುವ 39-ವರ್ಷ ವಯಸ್ಸಿನ ಪ್ರವೀಣ್, ಐನಾಜ್ ಸೌದರ್ಯಕ್ಕೆ ಮನಸೋತು ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆದರೆ ಯುವತಿ ಕ್ಯಾರೇ ಅಂದಿರಲಿಲ್ಲ.

ಐನಾಜ್ ತಿರಸ್ಕಾರದಿಂದ ರೊಚ್ಚಿಗೆದ್ದಿದ್ದ ಪ್ರವೀಣ್ ಆಕೆಗೆ ಗತಿಕಾಣಿಸುವ ಉದ್ದೇಶದಿಂದ ಮನೆಹೊಕ್ಕು, ಆಕೆಯನ್ನಲ್ಲದೆ ರಕ್ಷಣೆ ಧಾವಿಸಿದ್ದ ಐನಾಜ್ ತಾಯಿ, ಒಬ್ಬ ಸಹೋದರಿ ಮತ್ತು 12 ವರ್ಷದ ಸಹೋದರನನ್ನು ಚಾಕುವೊಂದರಿಂದ ತಿವಿದು ಹತ್ಯೆ ಮಾಡಿ ಮನೆಯಲ್ಲಿದ್ದ ಅಜ್ಜಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದ. ಭೀಕರ ಮತ್ತು ಬರ್ಬರ ಅಪರಾಧ ನಡೆಸಿದ ಬಳಿಕ ಪರಾರಿಯಾಗಿದ್ದ ಪ್ರವೀಣ್ ನನ್ನು ಉಡುಪಿ ಪೊಲೀಸರು ಸಾಂಗ್ಲಿಯಲ್ಲಿ ಬಂಧಿಸಿದ್ದರು. ಏರ್ ಇಂಡಿಯ ಕೆಲಸಕ್ಕೆ ಸೇರುವ ಮೊದಲು ಪ್ರವೀಣ್ ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದನಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ