ಕರಿ ಹರಿಯುವ ವೇಳೆ ಅವಘಡ: ಹಲವರಿಗೆ ಕೊಂಬಿನಿಂದ ತಿವಿದ ಹೋರಿ, ವಿಡಿಯೋ ವೈರಲ್​​

Updated on: Jun 10, 2023 | 8:11 PM

ಕರಿ ಹರಿಯುವ ವೇಳೆ ಹಲವರಿಗೆ ಕೊಂಬಿನಿಂದ ಹೋರಿ ತಿವಿದು ಗಾಯಗೊಳಿಸಿದೆ. ಸ್ಥಳೀಯರು ಹೋರಿ ತಿವಿಯುವ ವಿಡಿಯೋ ಮಾಡಿದ್ದು, ವೈರಲ್​ ಆಗಿದೆ.

ವಿಜಯಪುರ: ಕಾರಹುಣ್ಣಿಮೆ ರೈತರ ಪಾಲಿನ ಸಂಭ್ರಮದ ಹಬ್ಬಗಳಲ್ಲೊಂದು. ಪ್ರತಿ ವರ್ಷ ಉತ್ತರ ಕರ್ನಾಟಕ ಭಾಗದ ರೈತರು ಕಾರ ಹುಣ್ಣಿಮೆ (Kara Hunnime) ಯನ್ನು ಅತ್ಯಂತ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದಂದು ಕರಿ ಹರಿಯುವ ಸ್ಪರ್ಧೆಯನ್ನು ಸಹ ಆಯೋಜನೆ ಮಾಡಲಾಗುತ್ತದೆ. ಈ ವೇಳೆ ಆಕಸ್ಮಿಕ ಅವಘಡಗಳು ಸಂಭವಿಸುತ್ತವೆ. ಸದ್ಯ ಅಂತಹದ್ದೇ ಒಂದು ಅವಘಡ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ನಡೆದಿದೆ. ಕರಿ ಹರಿಯುವ ವೇಳೆ ಹಲವರಿಗೆ ಕೊಂಬಿನಿಂದ ಹೋರಿ ತಿವಿದು ಗಾಯಗೊಳಿಸಿದೆ. ಸ್ಥಳೀಯರು ಹೋರಿ ತಿವಿಯುವ ವಿಡಿಯೋ ಮಾಡಿದ್ದು, ವೈರಲ್​ ಆಗಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More