AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಪುಟ್ಟ ಬಾಲಕನ ವಿಡಿಯೊ ನೋಡಿ, ನಿಮ್ಮ ಮನ ಮಿಡಿಯಬಹುದು

ಹೃದಯ ಶಸ್ತ್ರಚಿಕಿತ್ಸೆಯ ನಂತರ ಪುಟ್ಟ ಬಾಲಕನೊಬ್ಬ ಆತನ ತಾಯಿಯ ಬಳಿ ಸಾಗುವ ವಿಡಿಯೊವೊಂದು ಎಲ್ಲರ ಮನಗೆದ್ದಿದೆ. ತಾಯಿ ಮಗನ ಈ ಒಲುಮೆಯ ಬಾಂಧವ್ಯ ನೆಟ್ಟಿಗರ ಮುಖದಲ್ಲಿ ಸಾರ್ಥಕತೆಯ ಭಾವ ಮೂಡಿಸಿದೆ.

Viral Video: ಈ ಪುಟ್ಟ ಬಾಲಕನ ವಿಡಿಯೊ ನೋಡಿ, ನಿಮ್ಮ ಮನ ಮಿಡಿಯಬಹುದು
ಪುಟ್ಟ ಬಾಲಕ ತಾಯಿಯ ಬಳಿ ಸಾಗುತ್ತಿರುವ ಚಿತ್ರ
Follow us
TV9 Web
| Updated By: shivaprasad.hs

Updated on: Jul 14, 2021 | 5:27 PM

ಆಸ್ಪತ್ರೆಗಳಿಗೆ ಭೇಟಿ ನೀಡದೆ ತಮ್ಮ ಜೀವನವನ್ನು ನಡೆಸುವುವರು ಎಷ್ಟು ಅದೃಷ್ಟಶಾಲಿಗಳು ಎಂಬ ಸತ್ಯವನ್ನು ಅರಿತುಕೊಳ್ಳದೆ ಹೆಚ್ಚಿನ ಜನರು ಸಣ್ಣ ಸಮಸ್ಯೆಗಳ ಬಗ್ಗೆ ಯೋಚಿಸಿ ತುಂಬಾ ಸಮಯವನ್ನು ಕಳೆಯುತ್ತಾರೆ. ಆದರೆ ಅಂಬೆಗಾಲಿಡುವ ಒಂದು ಪುಟ್ಟ ಮಗುವು ಹೃದಯ ಶಸ್ತ್ರಚಿಕಿತ್ಸೆಯ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಈ ವಿಡಿಯೊ ನಮ್ಮ ಅದೃಷ್ಟದ ಸೂಕ್ಷ್ಮ ಜ್ಞಾಪನೆಯಾಗಿದೆ. ತೊದಲು ನುಡಿಯನ್ನು ಕಲಿಯಬೇಕಾದ ಪುಟ್ಟ ವಯಸ್ಸಿನಲ್ಲಿ, ಈ ಮಗುವು ಬಹುದೊಡ್ಡ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಆದರೆ ಅದು ಆ ಮಗುವಿನ ಚೈತನ್ಯವನ್ನು ಕಸಿದುಕೊಳ್ಳಲಿಲ್ಲ. ಅವನು ಎಲ್ಲಾ ಸಮಸ್ಯೆಗಳ ವಿರುದ್ದ ಹೋರಾಡಿ ಅವನ ಕಾಲುಗಳ ಮೇಲೆ ನಿಂತುಕೊಂಡ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಈ ಹೃದಯಸ್ಪರ್ಶಿ ವಿಡಿಯೊ, ಅಂಬೆಗಾಲಿಡುವ ಮಗು ಹೃದಯ ಶಸ್ತ್ರಚಿಕಿತ್ಸೆಯ ನಂತರ ತನ್ನ ಮೊದಲ ಹೆಜ್ಜೆಗಳನ್ನು ಇಡುವುದನ್ನು ಒಳಗೊಂಡಿದೆ.

ಅಂತರ್ಜಾಲದಲ್ಲಿ ಹೊರಹೊಮ್ಮಿದ ಪುಟ್ಟ ಹುಡುಗನ ಮುದ್ದಾದ ವಿಡಿಯೊವೊಂದು ಸಾಮಾಜಿಕ ಮಾಧ್ಯಮ ಬಳಕೆದಾರರ ಗಮನ ಸೆಳೆದಿದ್ದಲ್ಲದೇ, ಎಲ್ಲರ ಅಂತಃಕರಣವನ್ನು ತಟ್ಟಿದೆ. ನಿಮಗೂ ಅಂಥದ್ದೇ ಅನುಭವವಾಗಬಹುದು. ಆಸ್ಪತ್ರೆಯೊಂದರಲ್ಲಿ ಸೆರೆಹಿಡಿಯಲಾದ ಈ ವಿಡಿಯೋದಲ್ಲಿ ಪುಟ್ಟ ಬಾಲಕನೊಬ್ಬ ಕಾಣಿಸಿಕೊಂಡಿದ್ದು, ಹೃದಯ ಶಸ್ತ್ರಚಿಕಿತ್ಸೆಯ ನಂತರ ತನ್ನ ಮೊದಲ ಹೆಜ್ಜೆಗಳನ್ನು ಇಟ್ಟುಕೊಂಡು ತನ್ನ ತಾಯಿಯತ್ತ ನಡೆಯುತ್ತಾನೆ. ಅಲ್ಲಿದ್ದ ನರ್ಸ್ ಹುಡುಗನಿಗೆ ತನ್ನ ತಾಯಿಯತ್ತ ನಡೆಯಲು ಸಹಾಯ ಮಾಡಿದರು. ನಂತರ ಆ ಪುಟ್ಟ ಮಗುವು ತನ್ನ ತಾಯಿಯನ್ನು ಪ್ರೀತಿಯಿಂದ ಅಪ್ಪಿಕೊಂಡಿತು.

ಹೃದಯ ಶಸ್ತ್ರಚಿಕಿತ್ಸೆಯ ನಂತರ ತನ್ನ ಮೊದಲ ಹೆಜ್ಜೆಗಳನ್ನು ತೆಗೆದುಕೊಳ್ಳುವ ಈ ಪುಟ್ಟ ಕಂದಮ್ಮನು ಯಾರ ಮುಖದಲ್ಲೂ ಮಂದಹಾಸ ತರಬಹುದು ಎಂಬ ಶೀರ್ಷಿಕೆ ನೀಡಿ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಈ ಕಿರು ಕ್ಲಿಪ್ ಅನ್ನು ಟ್ವಿಟರ್‌ಗೆ @ ಹಾಪ್‌ಕಿನ್ಸ್ ಬಿಆರ್‌ಎಫ್‌ಸಿ 21 ಎಂಬ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದು ವೈರಲ್ ಆಗಿದೆ. ಅನೇಕರು ಈ ಚಿಕ್ಕ ಬಾಲಕ “ಧೈರ್ಯಶಾಲಿ,” ಎಂದು ಕಾಮೆಂಟ್ ಮಾಡಿದ್ದಾರೆ.

(Video of Little boy takes his first steps towards mother after big heart operation goes viral in twitter)

ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?