ಅಮಾಯಕ ಯುವಕನ ಮೇಲೆ ಪೊಲೀಸರ ದರ್ಪ ಗಾಬರಿ ಹುಟ್ಟಿಸುತ್ತದೆ! ವಿಡಿಯೋ ನೋಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Sep 03, 2024 | 12:59 PM

ಕೆಲ ತಿಂಗಳುಗಳ ಹಿಂದೆ ಪ್ರಾಯಶಃ ಇದೇ ಯುವಕನ ಮೇಲೆ ಪೊಲೀಸರು ದರ್ಪ ಮೆರೆದಿದ್ದರು ಅನಿಸುತ್ತೆ. ಗೃಹ ಸಚಿವರ ನಿವಾಸಕ್ಕೆ ಅರ್ಜಿ ಸಲ್ಲಿಸಲೆಂದು ಬಂದಿದ್ದೇ ಯುವಕನ ಅಪರಾಧವೇ? ಗೂಂಡಾ ಮತ್ತು ರೌಡಿಗಳ ಜೊತೆ ಸ್ನೇಹಿತರಂತೆ ವರ್ತಿಸುವ ಪೊಲೀಸರು ಅಮಾಯಕನ ಮೇಲೆ ಶಕ್ತೊ ಪ್ರದರ್ಶನ ನಡೆಸುವುದನ್ನು ಕನ್ನಡಿಗರು ಖಂಡಿಸುತ್ತಾರೆ.

ಬೆಂಗಳೂರು: ಕರ್ನಾಟಕದಲ್ಲಿ ಪೊಲೀಸ್ ರಾಜ್ ನಡೆಯುತ್ತಿದೆಯೇ? ಈ ವಿಡಿಯೋ ನೋಡಿದರೆ ಅಂಥ ಗುಮಾನಿ ಹುಟ್ಟುತ್ತದೆ. ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಅರ್ಜಿ ನೀಡಲು ಬಂದ ಯುವಕನೊಬ್ಬನ ಮೇಲೆ ಪೊಲೀಸರು ದೌರ್ಜನ್ನು ಪ್ರದರ್ಶಿಸಿ ಅವನನ್ನು ವ್ಯಾನಲ್ಲಿ ಎತ್ಹಾಕಿಕೊಂಡು ಹೋಗುತ್ತಿರುವ ದೃಶ್ಯ ಗಾಬರಿ ಮತ್ತು ಆತಂಕ ಮೂಡಿಸುತ್ತದೆ. ಗೂಂಡಾಗಳ ಜೊತೆ ನಡೆದುಕೊಳ್ಳುವ ಹಾಗಿದೆ ಪೊಲೀಸರ ವರ್ತನೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Bengaluru News: ಆಟೋ ಡ್ರೈವರ್ ಮೇಲೆ ಸಂಚಾರಿ ಪೊಲೀಸ್ ಸಿಬ್ಬಂದಿ ದರ್ಪ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದೇ ಒಂದು, ಅಲ್ಲಾಗಿದ್ದೇ ಮತ್ತೊಂದು!

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.