Video: ಮಹಾಕುಂಭ ಮೇಳದಲ್ಲಿ ಸಿದ್ಧವಾಗುತ್ತಿದ್ದ ಅಡುಗೆಗೆ ಬೂದಿ ಹಾಕಿದ ಪೊಲೀಸ್

Updated on: Jan 31, 2025 | 7:58 AM

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಕಾರ್ಯಕ್ರಮದ ವೇಳೆ ಸಿದ್ಧಪಡಿಸಲಾಗುತ್ತಿದ್ದ ಅಡುಗೆಗೆ ಪೊಲೀಸ್​ ಒಬ್ಬರು ಬೂದಿ ಹಾಕಿರುವ ಘಟನೆ ವರದಿಯಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. ಘಟನೆ ವೈರಲ್ ಆಗುತ್ತಿದ್ದಂತೆ ಬ್ರಿಜೇಶ್ ಕುಮಾರ್ ತಿವಾರಿಯನ್ನು ಕೂಡಲೇ ಅಮಾನತುಗೊಳಿಸಲಾಗಿದೆ. ಡಿಸಿಪಿ (ಗಂಗಾ ನಗರ) ಕುಲದೀಪ್ ಸಿಂಗ್ ಗುಣವತ್ ಅವರು ಅಮಾನತುಗೊಳಿಸಿರುವುದನ್ನು ಖಚಿತಪಡಿಸಿದ್ದಾರೆ ಮತ್ತು ಇಲಾಖಾ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಕಾರ್ಯಕ್ರಮದ ವೇಳೆ ಸಿದ್ಧಪಡಿಸಲಾಗುತ್ತಿದ್ದ ಅಡುಗೆಗೆ ಪೊಲೀಸ್​ ಒಬ್ಬರು ಬೂದಿ ಹಾಕಿರುವ ಘಟನೆ ವರದಿಯಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. ಘಟನೆ ವೈರಲ್ ಆಗುತ್ತಿದ್ದಂತೆ ಬ್ರಿಜೇಶ್ ಕುಮಾರ್ ತಿವಾರಿಯನ್ನು ಕೂಡಲೇ ಅಮಾನತುಗೊಳಿಸಲಾಗಿದೆ. ಡಿಸಿಪಿ (ಗಂಗಾ ನಗರ) ಕುಲದೀಪ್ ಸಿಂಗ್ ಗುಣವತ್ ಅವರು ಅಮಾನತುಗೊಳಿಸಿರುವುದನ್ನು ಖಚಿತಪಡಿಸಿದ್ದಾರೆ ಮತ್ತು ಇಲಾಖಾ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. ಈ ವಿಡಿಯೋವನ್ನು ಮಾಜಿ ಸಿಎಂ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಶೇರ್ ಮಾಡಿದ್ದಾರೆ. ಮಹಾಕುಂಭಕ್ಕೆ ಬರುವವರಿಗೆ ಆಹಾರ, ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಆದರೆ ಈ ಒಳ್ಳೆಯ ಕಾರ್ಯ ಕೆಲವು ರಾಜಕೀಯ ದ್ವೇಷದಿಂದ ಹಾಳಾಗುತ್ತಿದೆ, ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More