Video: ಒನ್ ವೇಯಲ್ಲಿ ನುಗ್ಗಿದ ಶಾಲಾವಾಹನ: 12 ಮಕ್ಕಳ‌ ಪ್ರಾಣದ ಜತೆ ಚಾಲಕ ಚೆಲ್ಲಾಟ

Edited By:

Updated on: Sep 13, 2023 | 8:34 PM

Ramanagara News: ಒನ್ ವೇಯಲ್ಲಿ ಶಾಲಾವಾಹನ ನುಗ್ಗಿಸುವ ಮೂಲಕ ಚಾಲಕ ಮಕ್ಕಳ‌ ಪ್ರಾಣದ ಜತೆ ಚೆಲ್ಲಾಟವಾಡಿರುವಂತಹ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಕಾರಿನ ಮುಂಭಾಗದ ಕ್ಯಾಮೆರಾದಲ್ಲಿ ಚಾಲಕನ ದುಸ್ಸಾಹಸ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಡೇಂಜರ್ ಡ್ರೈವ್ ವಿಡಿಯೋ ವೈರಲ್​ ಆಗಿದೆ.

ರಾಮನಗರ, ಸೆಪ್ಟೆಂಬರ್​​​ 13: ಒನ್ ವೇಯಲ್ಲಿ ಶಾಲಾವಾಹನ ನುಗ್ಗಿಸುವ ಮೂಲಕ ಚಾಲಕ (driver) ಮಕ್ಕಳ‌ ಪ್ರಾಣದ ಜತೆ ಚೆಲ್ಲಾಟವಾಡಿರುವಂತಹ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಕಾರಿನ ಮುಂಭಾಗದ ಕ್ಯಾಮೆರಾದಲ್ಲಿ ಚಾಲಕನ ದುಸ್ಸಾಹಸ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಡೇಂಜರ್ ಡ್ರೈವ್ ವಿಡಿಯೋ ವೈರಲ್​ ಆಗಿದೆ. ಸ್ವಲ್ಪದರಲ್ಲಿ ಕಾರು ಚಾಲಕರು ಬಚಾವಾಗಿದ್ದಾರೆ. ಕ್ರೈಸ್ಟ್ ಶಾಲೆಯ ವಾಹನ ಎಂದು ಹೇಳಲಾಗಿತ್ತಿದೆ. ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಎಡಿಜಿಪಿ ಅಲೋಕ್ ಕುಮಾರ್​​ ಆದೇಶಿಸಿದ್ದು, 12ಕ್ಕೂ ಹೆಚ್ವು ಮಕ್ಕಳ ಪ್ರಾಣದ ಜತೆ ಚೆಲ್ಲಾಟವಾಡಿದ ಚಾಲಕನಿಗಾಗಿ ಕುಂಬಳಗೋಡು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 13, 2023 08:32 PM
Follow Us
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More