AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಬಂಧಿತ ಕೈದಿ

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Jan 04, 2024 | 11:32 AM

Share

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ ಅಪರಾಧಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ. ಆತನ ಮೇಲಿರುವ ಆರೋಪದ ಬಗ್ಗೆ ವಿಚಾರಣೆ ನಡೆಸಬೇಕಾದರೆ ಈ ಘಟನೆ ನಡೆದಿದೆ. ಈ ಅಪರಾಧಿ ಮೇಲೆ ಅನೇಕ ಪ್ರಕರಣಗಳಿದ್ದು, ಈಗಾಗಲೇ ಶಿಕ್ಷೆಯನ್ನು ಅನುಭವಿಸಿದ್ದಾನೆ. ಬ್ಯಾಟರಿ ದಂಧೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿ ಬುಧವಾರ ಕೋರ್ಟ್​​​ ಮುಂದೆ ಹಾಜರುಪಡಿಸಿದಲಾಗಿದೆ. ವಿಚಾರಣೆ ಸಮಯದಲ್ಲಿ ನ್ಯಾಯಧೀಶರ ಟೆಬಲ್​​ ಮೇಲೆ ಹಾರಿ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಮೇಲೆ ಹಲ್ಲೆ ನಡೆಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಡಿಯೋಬ್ರಾ ರೆಡ್ಡೆನ್ ನ್ಯಾಯಧೀಶರು ಇರುವ ಟೆಬಲ್​​​​ ಮೇಲೆ ಹಾರಿದ ವೇಳೆ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಅವರು ಕೆಳಗೆ ಬಿದ್ದು ತಲೆ ಗಾಯಗಳಾಗಿವೆ, ಇನ್ನು ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಅವರನ್ನು ಕಾಪಾಡಲು ಬಂದ ಕೋರ್ಟ್​​​​​​ ಮಾರ್ಷಲ್​​​​ಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ನ್ಯಾಯಧೀಶೆ ಹಾಗೂ ಮಾರ್ಷಲ್​​ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಅಪರಾಧಿಯನ್ನು ಕ್ಲಾರ್ಕ್ ಕೌಂಟಿ ಡಿಟೆನ್ಶನ್ ಸೆಂಟರ್‌ನಲ್ಲಿರುವ ಜೈಲಿಗೆ ಹಾಕಲಾಗಿದೆ. ಇತನ ಮೇಲೆ ಅನೇಕ ಪ್ರಕರಣಗಳಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!