AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿಗಳೇನು ಸಿಎಂ ಗುಲಾಮರಾ?: ಪರಿಷತ್​ ಸದಸ್ಯ ಹೆಚ್​. ವಿಶ್ವನಾಥ್​ ಕಿಡಿ

ಮಂತ್ರಿಗಳೇನು ಸಿಎಂ ಗುಲಾಮರಾ?: ಪರಿಷತ್​ ಸದಸ್ಯ ಹೆಚ್​. ವಿಶ್ವನಾಥ್​ ಕಿಡಿ

ರಾಮ್​, ಮೈಸೂರು
| Updated By: ಪ್ರಸನ್ನ ಹೆಗಡೆ|

Updated on: Oct 16, 2025 | 12:07 PM

Share

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಧಾನ ಪರಿಷತ್​ ಸದಸ್ಯ ಹೆಚ್​. ವಿಶ್ವನಾಥ್​ ಕಿಡಿ ಕಾರಿದ್ದಾರೆ. ಯಾವುದೇ ಮಾನದಂಡವಿಲ್ಲದೆ ಮಹಿಳೆಯರಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ಹಣ ನೀಡುತ್ತಿರೋದನ್ನ ಆಕ್ಷೇಪಿಸಿರುವ ಅವರು, ಮಂತ್ರಿಗಳೇನು ಸಿಎಂ ಸಿದ್ದರಾಮಯ್ಯ ಅವರ ಗುಲಾಮರಾಗಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಮೈಸೂರು, ಅಕ್ಟೋಬರ್​ 16: ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿ ಎಲ್ಲದಕ್ಕೂ ಮಾನದಂಡಗಳಿವೆ. ಹೀಗಿರುವಾಗ ಯಾವುದಾದರೂ ಹುಚ್ಚ ಮಹಿಳೆಯರಿಗೆ ಯಾವ ಮಾನದಂಡವಿಲ್ಲದೆ ಪ್ರತಿ ತಿಂಗಳು 2 ಸಾವಿರ ಹಣ ಕೊಡುತ್ತಾನಾ ಎಂದು ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ವಾಗ್ದಾಳಿ ನಡೆಸಿರುವ ಅವರು, ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡಿತಿಗೂ ಫ್ರೀ ಅಂತಾರೆ. ಇದು ಯಾರ ಅಪ್ಪನ ಮನೆ ದುಡ್ಡಲ್ಲ ಸಿದ್ದರಾಮಯ್ಯನವರೇ, ಜನರ ತೆರಿಗೆ ಹಣ. ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್​ ಕಿಡಿ ಕಾರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.