AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನ ಅಂತ್ಯಕ್ರಿಯೆ: ಚಿತಾಗಾರದಲ್ಲಿ ದೇಹವನ್ನು ತೆಗೆದುಕೊಂಡು ಹೋದಾಗ ವಿಜಯ್, ಮುರಳಿ ಮತ್ತು ಶೌರ್ಯ ಒಬ್ಬರ ಹೆಗಲ ಮೇಲೆ ಮತ್ತೊಬ್ಬರು ತಲೆಯಿಟ್ಟು ಅತ್ತರು

ಸ್ಪಂದನ ವಿಜಯ್ ಅಂತಿಮ ಸಂಸ್ಕಾರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿರುವ ಚಿತಾಗಾರದಲ್ಲಿ ನೆರವೇರಿಸಲಾಯಿತು. ಸ್ಪಂದನ ಅಂತಿಮಯಾತ್ರೆಯಲ್ಲಿ ಸಿನಿಮಾ ಕ್ಷೇತ್ರದವರು, ರಾಜಕಾರಣಿಗಳಲ್ಲದೆ, ಬೇರೆ ಬೇರೆ ಕ್ಷೇತ್ರಗಳ ಗಣ್ರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 09, 2023 | 6:36 PM

Share

ಬೆಂಗಳೂರು: ಇದು ಕರುಳು ಕಿತ್ತು ಬರುವ ದೃಶ್ಯ, ಸ್ಪಂದನ ವಿಜಯರಾಘವೇಂದ್ರ (Spandana Vijay Raghavendra) ಅವರ ದೇಹವನ್ನು ಚಿತಾಗಾರದೊಳಗೆ ತೆಗೆದುಕೊಂಡು ಹೋದಾಗ ಕಂಡ ದೃಶ್ಯವಿದು. ಪತ್ನಿಯನ್ನು ಕಳೆದುಕೊಂಡ ವಿಜಯರಾಘವೇಂದ್ರ (Vijay Raghavendra), ಅಮ್ಮನನ್ನು ಕಳದುಕೊಂಡ ಶೌರ್ಯ (Shourya ) ಮತ್ತು ಅಮ್ಮನಂಥ ಅತ್ತಿಗೆಯನ್ನು ಕಳೆದುಕೊಂಡ ಶ್ರೀಮುರಳಿ (Sri Murali)-ಒಬ್ಬರ ಹೆಗಲ ಮೇಲೆ ಮತ್ತೊಬ್ಬರು ತಲೆಯಿಟ್ಟು ಅಳುತ್ತಿರುವ ದೃಶ್ಯ ಮನ ಕಲಕುತ್ತದೆ. ಸೋಮವಾರ ಬೆಳಗ್ಗೆ ಥಾಯ್ಲೆಂಡ್ ರಾಜಧಾನಿಯ ಹೋಟೆಲೊಂದರಲ್ಲಿ ಹೃದಯಾಘಾತದಿಂದ ಆಕಾಲಿಕ ಮರಣವನ್ನಪ್ಪಿದ ಸ್ಪಂದನ ವಿಜಯ್ ಅಂತಿಮ ಸಂಸ್ಕಾರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿರುವ ಚಿತಾಗಾರದಲ್ಲಿ ನೆರವೇರಿಸಲಾಯಿತು. ಸ್ಪಂದನ ಅಂತಿಮಯಾತ್ರೆಯಲ್ಲಿ ಸಿನಿಮಾ ಕ್ಷೇತ್ರದವರು, ರಾಜಕಾರಣಿಗಳಲ್ಲದೆ, ಬೇರೆ ಬೇರೆ ಕ್ಷೇತ್ರಗಳ ಗಣ್ರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.