AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನರ ಹಾಲು ತುಪ್ಪ ಬಿಡುವ ಶಾಸ್ತ್ರ ನೆರವೇರಿಸಿದ ವಿಜಯರಾಘವೇಂದ್ರ ಮತ್ತು ಬಿಕೆ ಶಿವರಾಂ ಕುಟುಂಬ

ಸ್ಪಂದನರ ಹಾಲು ತುಪ್ಪ ಬಿಡುವ ಶಾಸ್ತ್ರ ನೆರವೇರಿಸಿದ ವಿಜಯರಾಘವೇಂದ್ರ ಮತ್ತು ಬಿಕೆ ಶಿವರಾಂ ಕುಟುಂಬ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 11, 2023 | 12:08 PM

Share

ಕುಟುಂಬದ ಸದಸ್ಯರೊಂದಿಗೆ ವಿದೇಶ ಪ್ರವಾಸ ತೆರಳಿದ್ದ ಸ್ಪಂದನ ವಿಜಯರಾಘವೇಂದ್ರ ಸೋಮವಾರ ಬೆಳಗಿನ ಜಾವ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನ ಹೊಟೆಲೊಂದರಲ್ಲಿ ಕಡಿಮೆ ರಕ್ತದೊತ್ತಡದಿಂದ ಕಾರ್ಡಿಯಾಕ್ ಅರೆಸ್ಟ್ ಆಗಿ ಸಾವನ್ನಪ್ಪಿದರು.

ಬೆಂಗಳೂರು: ಅಲ್ಪಾಯುಷಿಯಾಗಿ ಜೀವಿಸಿ ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಮರಣವನ್ನನ್ನಪ್ಪಿದ ಸ್ಪಂದನ ವಿಜಯರಾಘವೇಂದ್ರರ (Spandana Vijay Raghavendra) ಹಾಲು ತುಪ್ಪ ಶಾಸ್ತ್ರವನ್ನು ಕುಟುಂಬಸ್ಥರು ಇಂದು ನೇರವೇರಿಸಿದರು. ಮೊದಲಿಗೆ ವಿಜಯರಾಘವೇಂದ್ರ (Vijay Raghavendra) ಮತ್ತು ಅವರ ಮಗ ಶೌರ್ಯ (Shourya) ಹಾಲು ತುಪ್ಪ ಬಿಡುವ ಶಾಸ್ತ್ರ ನೆರವೇರಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಬಿಕೆ ಶಿವರಾಂ, ರಕ್ಷಿತ್ ಮತ್ತು ಕುಟುಂಬದ ಸದಸ್ಯರು ಒಬ್ಬರ ನಂತರ ಮತ್ತೊಬ್ಬರಂತೆ ಶಾಸ್ತ್ರ ಪೂರೈಸಿದರು. ಸ್ಪಂದನ ಮಾವ ಅಂದರೆ ವಿಜಯ ರಾಘವೇಂದ್ರ ಮತ್ತು ಶ್ರೀ ಮುರಳಿ ತಂದೆ ಎಸ್ ಎ ಚಿನ್ನೇಗೌಡ ಅವರು ಶೌರ್ಯನ ಬಲಭಾಗದಲ್ಲಿದ್ದರೆ ಮುರಳಿ ಎಡಕ್ಕಿದ್ದರು. ಬೇರೆಯವರೆಲ್ಲ ಶಾಸ್ತ್ರ ನಡೆಸುವಾಗ ವಿಜಯರಾಘವೇಂದ್ರ ಹಿಂದೆ ಸರಿದು ನಿರ್ಭಾವುಕರಾಗಿ ನಿಲ್ಲುತ್ತಾರೆ. ಕುಟುಂಬದ ಸದಸ್ಯರೊಂದಿಗೆ ವಿದೇಶ ಪ್ರವಾಸ ತೆರಳಿದ್ದ ಸ್ಪಂದನ ವಿಜಯರಾಘವೇಂದ್ರ ಸೋಮವಾರ ಬೆಳಗಿನ ಜಾವ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನ ಹೊಟೆಲೊಂದರಲ್ಲಿ ಕಡಿಮೆ ರಕ್ತದೊತ್ತಡದಿಂದ ಕಾರ್ಡಿಯಾಕ್ ಅರೆಸ್ಟ್ ಆಗಿ ಸಾವನ್ನಪ್ಪಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More