ಸ್ಪಂದನಾ ಸಾವಿನ ಬಳಿಕ ಮೊದಲ ಬಾರಿ ವೇದಿಕೆಗೆ ಬಂದು ಗಳಗಳನೆ ಕಣ್ಣೀರು ಹಾಕಿದ ವಿಜಯ್​ ರಾಘವೇಂದ್ರ

Updated on: Aug 27, 2023 | 8:43 AM

‘ಕದ್ದ ಚಿತ್ರ’ ಸಿನಿಮಾದ ಸುದ್ದಿಗೋಷ್ಠಿ ಶನಿವಾರ (ಆಗಸ್ಟ್​ 26) ನಡೆಯಿತು. ಸ್ಪಂದನಾ ನಿಧನದ ಬಳಿಕ ವಿಜಯ್​ ರಾಘವೇಂದ್ರ ಅವರು ವೇದಿಕೆ ಏರಿದ್ದು ಇದೇ ಮೊದಲು. ಇತ್ತೀಚೆಗೆ ತಮ್ಮ ಜೀವನದ ಕಷ್ಟದ ದಿನಗಳಲ್ಲಿ ಬೆಂಬಲವಾಗಿ ನಿಂತಿದ್ದ ಎಲ್ಲರಿಗೂ ಧನ್ಯವಾದ ತಿಳಿಸುತ್ತಾ ಅವರು ಭಾವುಕರಾದರು. ಆ ಸಂದರ್ಭದ ವಿಡಿಯೋ ಇಲ್ಲಿದೆ..

ನಟ ವಿಜಯ್​ ರಾಘವೇಂದ್ರ (Vijay Raghavendra) ಅವರು ಈಗ ನೋವಿನಲ್ಲಿದ್ದಾರೆ. ಅದರ ನಡುವೆಯೂ ಅವರು ನಿರ್ಮಾಪಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ‘ಕದ್ದ ಚಿತ್ರ’ (Kadda Chitra) ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್​ 25ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸ್ಪಂದನಾ ವಿಜಯ್​ ರಾಘವೇಂದ್ರ (Spandana Vijay Raghavendra) ಅವರ ನಿಧನದಿಂದ ಚಿತ್ರದ ರಿಲೀಸ್​ ದಿನಾಂಕ ಮುಂದೆ ಹೋಯಿತು. ಈ ಸಿನಿಮಾದ ಸುದ್ದಿಗೋಷ್ಠಿ ಶನಿವಾರ (ಆಗಸ್ಟ್​ 26) ನಡೆಯಿತು. ಈ ವೇಳೆ ವೇದಿಕೆಯಲ್ಲಿ ವಿಜಯ್​ ರಾಘವೇಂದ್ರ ಮಾತನಾಡಿದರು. ಇತ್ತೀಚೆಗೆ ತಮ್ಮ ಜೀವನದ ಕಷ್ಟದ ದಿನಗಳಲ್ಲಿ ಬೆಂಬಲವಾಗಿ ನಿಂತಿದ್ದ ಎಲ್ಲರನ್ನೂ ನೆನಪಿಸಿಕೊಂಡು ಅವರು ಭಾವುಕರಾದರು. ‘ನೀವೆಲ್ಲರೂ ತಾಯಿ ಸ್ಥಾನದಲ್ಲಿ ನಿಂತು ನನ್ನನ್ನು ಸಂತೈಸಿದ್ದೀರಿ. ಯಾರೂ ಹೊರಗಿನವರ ರೀತಿ ನಡೆದುಕೊಳ್ಳಲಿಲ್ಲ. ಕಣ್ಣೀರು ಹಾಕಬಾರದು ಎಂದುಕೊಂಡು ಇಲ್ಲಿಗೆ ಬಂದೆ. ಯಾಕೆಂದರೆ, ಸ್ಪಂದನಾಗೂ ಅದು ಇಷ್ಟ ಆಗುತ್ತಿರಲಿಲ್ಲ’ ಎಂದು ಹೇಳುತ್ತಾ ವಿಜಯ್ ರಾಘವೇಂದ್ರ ಭಾವುಕರಾಗಿ ಗಳಗಳನೆ ಅತ್ತರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More