ಸ್ಪಂದನ ಅಕಾಲಿಕ ಸಾವು: ವಿಜಯರಾಘವೇಂದ್ರ ವಿವಾಹ ವಾರ್ಷಿಕೋತ್ಸವವನ್ನು ಬಹಳ ಗ್ರ್ಯಾಂಡ್ ಆಗಿ ಅಚರಿಸುವ ಯೋಜನೆ ಹಾಕಿಕೊಂಡಿದ್ದರು

ಮಕ್ಕಳನ್ನು ತಬ್ಬಲಿಯಾಗಿಸಿ ಪತಿಯನ್ನು ಯಾವತ್ತೂ ಚೇತರಿಸಿಕೊಳ್ಳಲಾಗದ ಸ್ಥಿತಿಗೆ ದೂಡಿ, ಚಿನ್ನೇಗೌಡ ಮತ್ತು ಬಿಕೆ ಶಿವರಾಂ ಕುಟುಂಬಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಸ್ಪಂದನ ಇಹಲೋಕದ ಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿಕೊಂಡು ಕಣ್ಮರೆಯಾಗಿದ್ದಾರೆ.

ಸ್ಪಂದನ ಅಕಾಲಿಕ ಸಾವು: ವಿಜಯರಾಘವೇಂದ್ರ ವಿವಾಹ ವಾರ್ಷಿಕೋತ್ಸವವನ್ನು ಬಹಳ ಗ್ರ್ಯಾಂಡ್ ಆಗಿ ಅಚರಿಸುವ ಯೋಜನೆ ಹಾಕಿಕೊಂಡಿದ್ದರು
| Updated By: Digi Tech Desk

Updated on:Aug 08, 2023 | 11:07 AM

ಬೆಂಗಳೂರು: ಈಗಾಗಲೇ ವರದಿಯಾಗಿರುವಂತೆ ನಿನ್ನೆ (ಸೋಮವಾರ) ಬೆಳಗಿಮ ಜಾವ ಭಾರೀ ಹೃದಯಾಘಾತಕ್ಕೊಳಗಾಗಿ ಚಿಕ್ಕ ವಯಸ್ಸಿನಲ್ಲೇ ಮರಣವನ್ನಪ್ಪಿದ ಸ್ಪಂದನ ವಿಜಯರಾಘವೇಂದ್ರ (Spandana Vijay Raghavendra) ಅವರ ಪಾರ್ಥಿವ ಶರೀರ ಮಂಗಳವಾರ ತಡರಾತ್ರಿ ಬೆಂಗಳೂರು ತಲುಪಲಿದೆ. ಚಿತ್ರ ನಿರ್ಮಾಪಕ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರ ಕಿರಿಯ ಸಹೋದರ ಎಸ್ ಎ ಚಿನ್ನೇಗೌಡರ (SA Chinne Gowda) ಮಗ ವಿಜಯರಾಘವೇಂದ್ರರನ್ನು (Vijay Raghavendra) ಪ್ರೀತಿಸಿ ವರಿಸಿದ್ದ ಸ್ಪಂದನ ಆಗಸ್ಟ್ 26 ರಂದು ತಮ್ಮ 16ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಲಿದ್ದರು. ಕುಟುಂಬದ ಮೂಲಗಳ ಪ್ರಕಾರ ವಿಜಯ್ ವಾರ್ಷಿಕೋತ್ಸವದ ಬಗ್ಗೆ ಬಹಳ ಉತ್ಸುಕರಾಗಿದ್ದರು ಮತ್ತು ದಿನವನ್ನು ಬಹಳ ಗ್ರ್ಯಾಂಡ್ ಆಗಿ ಆಚರಿಸುವ ಪ್ಲ್ಯಾನ್ ಮಾಡಿದ್ದರು. ಆದರೆ ವಿಧಿ ಸ್ಪಂದನ ಮತ್ತು ವಿಜಯರಾಘವೇಂದ್ರ ಬದುಕಿನಲ್ಲಿ ಯಾರೂ ನೆನಸದಷ್ಟು ಕ್ರೂರ ಆಟವಾಡಿದೆ. ತನ್ನಿಬ್ಬರು ಮಕ್ಕಳನ್ನು ತಬ್ಬಲಿಯಾಗಿಸಿ ವಿಜಯರಾಘವೇಂದ್ರರನ್ನು ಯಾವತ್ತೂ ಚೇತರಿಸಿಕೊಳ್ಳಲಾಗದ ಸ್ಥಿತಿಗೆ ದೂಡಿ, ಚಿನ್ನೇಗೌಡ ಮತ್ತು ಬಿಕೆ ಶಿವರಾಂ ಕುಟುಂಬಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಸ್ಪಂದನ ಇಹಲೋಕದ ಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿಕೊಂಡು ಕಣ್ಮರೆಯಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Tue, 8 August 23

Follow us
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ