ಧಾರಾಕಾರ ಮಳೆಗೆ ಬಸ್ ನಿಲ್ದಾಣ ಜಲಾವೃತ: ಪ್ರಯಾಣಿಕರ ಪರದಾಟ
ಬಳ್ಳಾರಿ ಜಿಲ್ಲೆಯಾದ್ಯಂತ ಮಳೆಯಾಗದೆ ಸುಮಾರು 30ಕ್ಕೂ ಹೆಚ್ಚು ಕೆರೆಗಳು ಬರಡಾಗಿವೆ. ಆದರೆ ಇಂದು ವರುಣರಾಯ ಕಣ್ತೆರೆದಿದ್ದು, ಜೋರು ಮಳೆ ಆಗಿದೆ. ಹೀಗಾಗಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಧಾರಾಕಾರ ಮಳೆ ಹಿನ್ನಲೆ ಕೊಟ್ಟೂರು ಬಸ್ ನಿಲ್ದಾಣ ಜಲಾವೃತವಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. ತಮ್ಮೂರಿಗೆ ಹೋಗಲು ಬಸ್ ಹತ್ತಲು ಮಹಿಳಾ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ವಿಜಯನಗರ, ಮೇ 15: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಧಾರಾಕಾರ ಮಳೆ (Rain) ಹಿನ್ನಲೆ ಕೊಟ್ಟೂರು ಬಸ್ ನಿಲ್ದಾಣ ಜಲಾವೃತವಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. 2 ಅಡಿ ಎತ್ತರಕ್ಕೆ ನಿಂತ ನೀರಿನಲ್ಲೇ ಪ್ರಯಾಣಿಕರು ಓಡಾಡುವಂತಾಗಿದೆ. ಜಲಾವೃತವಾದ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಕೆಎಸ್ಆರ್ಟಿಸಿ (KSRTC) ಬಸ್ ನಿಂತುಕೊಂಡಿವೆ. ತಮ್ಮೂರಿಗೆ ಹೋಗಲು ಬಸ್ ಹತ್ತಲು ಮಹಿಳಾ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಳೆ ಇಲ್ಲದೇ ಬಳ್ಳಾರಿ ಜಿಲ್ಲೆಯಾದ್ಯಂತ 30 ಕ್ಕೂ ಹೆಚ್ಚು ಕೆರೆಗಳು ನೀರಿಲ್ಲದೆ ಬರಡು ಬರಡಾಗಿವೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್ಗಳಿಗೆ ಮುಗಿಬಿದ್ದ ಜನ
