AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಸಾವು ಗೆದ್ದು ಬಂದ 2 ವರ್ಷದ ಸಾತ್ವಿಕ್ ಆ್ಯಂಬುಲೆನ್ಸ್​ನಲ್ಲಿ​​ ಆಸ್ಪತ್ರೆಗೆ ಶಿಫ್ಟ್

ವಿಜಯಪುರ: ಸಾವು ಗೆದ್ದು ಬಂದ 2 ವರ್ಷದ ಸಾತ್ವಿಕ್ ಆ್ಯಂಬುಲೆನ್ಸ್​ನಲ್ಲಿ​​ ಆಸ್ಪತ್ರೆಗೆ ಶಿಫ್ಟ್

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Apr 04, 2024 | 3:22 PM

Share

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದ ಮಗು ಸಾತ್ವಿಕ 20 ಅಡಿಯ ಆಳದಲ್ಲಿ ಸಿಲುಕಿಕೊಂಡಿದ್ದ. ಸುದ್ದಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ NDRF ಮತ್ತು SDRF ಸಿಬ್ಬಂದಿಗಳ 22 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ಮಗುವನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ. ಬಳಿಕ ವೈದ್ಯಕೀಯ ಸಿಬ್ಬಂದಿಗಳು ಸಾತ್ವಿಕ್​ನನ್ನು ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯಪುರ, ಮಾರ್ಚ್​​ 04: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ 2 ವರ್ಷದ ಮಗು ಸಾತ್ವಿಕ್ (sathwik) ಮುಜುಗೊಂಡ ನಿನ್ನೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ 500 ಅಡಿ ಆಳದ ತೆರೆೆದ ಕೊಳವೆ ಬಾವಿಗೆ ಬಿದ್ದುಬಿಟ್ಟಿದೆ. 20 ಅಡಿಯ ಆಳದಲ್ಲಿ ಮಗು ಸಿಲುಕಿಕೊಂಡಿತ್ತು. ಸುದ್ದಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎನ್​ಡಿಆರ್​ಎಫ್​ ಮತ್ತು ಎಸ್​ಡಿಆರ್​​ಎಫ್​ ಸಿಬ್ಬಂದಿ ಎಂಡೋಸ್ಕೋಪ್ ಕ್ಯಾಮರಾದಲ್ಲಿ ಮಗು ಸಿಲುಕಿಕೊಂಡಿರುವ ಸ್ಥಳವನ್ನು ಗುರುತಿಸಲಾಯ್ತು. ಮಗುವಿನ ಕಾಲು ಕ್ಯಾಮರಾದಲ್ಲಿ ಗೋಚರವಾಗಿದೆ. ನಿರಂತರವಾಗಿ ಆಮ್ಲಜನಕ ಪೂರೈಕೆ ಮಾಡುವ ಮೂಲಕ 22 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ಮಗುವನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ. ಬಳಿಕ ವೈದ್ಯಕೀಯ ಸಿಬ್ಬಂದಿಗಳು ಸಾತ್ವಿಕ್​ನನ್ನು ಆ್ಯಂಬುಲೆನ್ಸ್​ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಇಂಡಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published on: Apr 04, 2024 03:08 PM
Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More