ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ

Edited By:

Updated on: Feb 19, 2026 | 9:27 PM

ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ ಬಬಲಾದಿ ಸ್ವಾಮೀಜಿಯು ಭವಿಷ್ಯ ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದು, 2026ರ ಕಾಲಜ್ಞಾನ ಭವಿಷ್ಯ ಹೇಳಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರುವು. ರೋಗ, ಯುದ್ಧ ಮತ್ತು ಪ್ರಕೃತಿ ವಿಕೋಪಗಳ ಎಚ್ಚರಿಕೆಯ ಜೊತೆಗೆ, ರೈತರಿಗೆ ಹಾಗೂ ದೇಶದ ಆರ್ಥಿಕತೆಗೆ ಲಾಭವಾಗುವ ಮಾತುಗಳು ಕೂಡ ಹೇಳಿದ್ದಾರೆ.

ವಿಜಯಪುರ (ಫೆಬ್ರವರಿ 19): ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ (Vijayapura) ಬಬಲಾದಿ ಸ್ವಾಮೀಜಿಯು ಭವಿಷ್ಯ (Babaladi Mutya Kalajnana Bhavishya) ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದು, 2026ರ ಕಾಲಜ್ಞಾನ ಭವಿಷ್ಯ ಹೇಳಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರುವು. ರೋಗ, ಯುದ್ಧ ಮತ್ತು ಪ್ರಕೃತಿ ವಿಕೋಪಗಳ ಎಚ್ಚರಿಕೆಯ ಜೊತೆಗೆ, ರೈತರಿಗೆ ಹಾಗೂ ದೇಶದ ಆರ್ಥಿಕತೆಗೆ ಲಾಭವಾಗುವ ಮಾತುಗಳು ಕೂಡ ಹೇಳಿದ್ದಾರೆ.

ರಾಜಕೀಯ ಮತ್ತು ರಕ್ಷಣಾ ವಲಯದ ಬಗ್ಗೆಯೂ ಸದಾಶಿವ ಮುತ್ತಜ್ಜ ಮಹತ್ವದ ಸೂಚನೆ ನೀಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹೊಸ ತಿರುವುಗಳು ಉಂಟಾಗಲಿವೆ ಎಂದಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ ನಡೆಯುತ್ತಿರುವ ಕುರ್ಚಿ ಫೈಟ್‌ ತಾರ್ಕಿಕ ಅಂತ್ಯ ಕಾಣಲಿದ್ಯಾ ಎನ್ನುವ ಚರ್ಚೆ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ