ತಲ್ವಾರ್ನಿಂದ ಬರ್ತಡೇ ಕೇಕ್ ಕತ್ತರಿಸಿದ ಯುವಕ: ಸಾಥ್ ನೀಡಿದ ರೌಡಿ ಶೀಟರ್
ಯುವಕನೋರ್ವ ತನ್ನ ಜನ್ಮದಿನದ ಕೇಕ್ನ್ನು ತಲ್ವಾರ್ನಿಂದ ಕತ್ತರಿಸಿರುವಂತಹ ಘಟನೆ ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ತಲ್ವಾರ್ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದಾನೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ.
ವಿಜಯಪುರ, ಜನವರಿ 15: ಯುವಕನೋರ್ವ ತನ್ನ ಜನ್ಮದಿನದ ಕೇಕ್ನ್ನು ತಲ್ವಾರ್ (Talwar)ನಿಂದ ಕತ್ತರಿಸಿರುವಂತಹ ಘಟನೆ ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ತಲ್ವಾರ್ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದಾನೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಅಮನ್ ಲೋಣಿ ಹಾಗೂ ರೌಡಿ ಶೀಟರ್ನ್ನು ಠಾಣೆಗೆ ಕರೆಸಿದ ಗೋಲಗುಂಬಜ್ ಪೊಲೀಸರು ವಿಚಾರಣೆ ಮಾಡಿದ್ದಾರೆ. ಇಬ್ಬರ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡಿದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
