AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಬಾಗೇವಾಡಿ: ತುಂಬಿ ಹರಿದ ಹತ್ತರಕಿಹಾಳ ಹಳ್ಳ, ಜೆಸಿಬಿ ಮೂಲಕ ರಸ್ತೆ ದಾಟಿದ ಜನರು 

ಬಸವನಬಾಗೇವಾಡಿ: ತುಂಬಿ ಹರಿದ ಹತ್ತರಕಿಹಾಳ ಹಳ್ಳ, ಜೆಸಿಬಿ ಮೂಲಕ ರಸ್ತೆ ದಾಟಿದ ಜನರು 

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jun 09, 2024 | 2:33 PM

Share

ವಿಜಯಪುರ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬಸವನಬಾಗೇವಾಡಿ ತಾಲೂಕಿನ ಹತ್ತರಕಿಗಾಳ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆ ಮೇಲೆ ಹತ್ತರಕಿಹಾಳ ಹಳ್ಳ ತುಂಬಿ ಹರಿದಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿದ ಪರಿಣಾಮ ಹತ್ತರಕಿಹಾಳ ಬಸವನಬಾಗೇವಾಡಿ ಸಂಪರ್ಕ ರಸ್ತೆ ಬಂದ್ ಆಗಿದೆ.

ವಿಜಯಪುರ, ಜೂನ್​ 09: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ (Rain). ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬಸವನಬಾಗೇವಾಡಿ (Basavan Bagewadi) ತಾಲೂಕಿನ ಹತ್ತರಕಿಗಾಳ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆ ಮೇಲೆ ಹತ್ತರಕಿಹಾಳ ಹಳ್ಳ ತುಂಬಿ ಹರಿದಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿದ ಪರಿಣಾಮ ಹತ್ತರಕಿಹಾಳ ಬಸವನಬಾಗೇವಾಡಿ ಸಂಪರ್ಕ ರಸ್ತೆ ಬಂದ್ ಆಗಿದೆ. ಹೀಗಾಗಿ ಜನರು ರಸ್ತೆ ದಾಟಲು ಪರದಾಡಿದರು. ಈ ವೇಳೆ ಜನರು ಜೆಸಿಬಿಯ ಬಕೆಟ್​​ನಲ್ಲಿ ಕೂತು ಮತ್ತು ಜೆಸಿಬಿಯ (JCB) ಹಿಂಬಾಗದಲ್ಲಿ ನಿಂತು ರಸ್ತೆ ದಾಟಿಸಿದರು. ಜೆಸಿಬಿಯಲ್ಲಿ ಜನರು ರಸ್ತೆ ದಾಟಿದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ತುಂಬಿ ಹರಿಯುತ್ತಿದ್ದ ನದಿಗೆ ಮಗುಚಿ ಬಿದ್ದ ಕಾರ್ಮಿಕರಿದ್ದ ಟ್ರ್ಯಾಕ್ಟರ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More