ವಿಜಯಪುರ: ಹೊನವಾಡ ಗ್ರಾಮದ 11 ಎಕರೆ ಜಮೀನು ಮಾತ್ರ ವಕ್ಫ್​ಗೆ ಸೇರಿದ್ದು; ಎಂ ಬಿ ಪಾಟೀಲ್​

| Updated By: ವಿವೇಕ ಬಿರಾದಾರ

Updated on: Oct 27, 2024 | 12:01 PM

Vijayapura Waqf Raw: ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಹೊನವಾಡ ಗ್ರಾಮದ 1200 ಎಕರೆ ಜಮೀನು ವಕ್ಫ್​ಗೆ ಸೇರಿದ್ದು ಎಂಬ ವಂದತಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್​ ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರ, ಅಕ್ಟೋಬರ್​ 27: ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 1200 ಎಕರೆ ಜಮೀನು ವಕ್ಫ್​​ಗೆ (Waqf Raw) ಸೇರಿದೆ ಎಂಬ ವಂದತಿ ಸುಳ್ಳು ಸುದ್ದಿಯಾಗಿದೆ. ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಕ್ಫ್​ ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.

ಹೊನವಾಡ ಗ್ರಾಮದ ಜಮೀನಿನಗಳು 1974ರಲ್ಲಿ ವಕ್ಫ್​​​ ಗೆಜೆಟ್​​​ನಲ್ಲಿ ತಪ್ಪಾಗಿ ನಮೂದಿಸಲಾಗಿದೆ. 1977ರಲ್ಲಿ ಈ ತಪ್ಪನ್ನು ವಕ್ಫ್ ಮಂಡಳಿ ಸರಿಪಡಿಸಿದೆ. ಹೊನವಾಡ ಗ್ರಾಮದ 10 ರಿಂದ 11 ಎಕರೆ ಮಾತ್ರ ವಕ್ಫ್​ಗೆ ಸೇರಿದೆ. ಉಳಿದ ಜಮೀನು ಹೊನವಾಡ ಗ್ರಾಮದ ರೈತರಿಗೆ ಸೇರಿದೆ. ಗೆಜೆಟ್​​ ನೋಟಿಫಿಕೇಷನ್​​ನಿಂದ ಗೊಂದಲ ಸೃಷ್ಟಿಯಾಗಿದೆ. ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ವಿಜಯಪುರ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್​ ಹೆಸರು: ಕಂಗಾಲಾದ ಅನ್ನದಾತ

ಸೃಷ್ಟಿಯಾಗಿರುವ ಗೊಂದಲ ನಿವಾರಣೆಗೆ ಇಂದು (ಅ.26) ವಕ್ಫ್​ ಹಾಗೂ ಇತರೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಬಳಿಕ ಎಲ್ಲ ಮಾಹಿತಿ ನೀಡುವೆ ಎಂದು ಹೇಳಿದರು.

ಏನಿದು ವಿವಾದ

ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿನ 1200 ಎಕರೆ ಜಮೀನು ಶಾ ಅಮೀನುದ್ದೀನ್ ದರ್ಗಾಕ್ಕೆ ಸೇರಿದ್ದು ಎಂದು ತಹಶೀಲ್ದಾರ್​​ ರೈತರಿಗೆ ನೋಟಿಸ್ ನೀಡಿದ್ದಾರೆ. ಆದರೆ ನಮ್ಮ ಗ್ರಾಮದಲ್ಲಿ ಶಾ ಅಮೀನುದ್ದೀನ್ ದರ್ಗಾ ಇಲ್ಲ ಎಂದು ರೈತರು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on