ವಿಜಯಪುರ: ಸೋರುತ್ತಿರುವೆ ಸರ್ಕಾರಿ ಶಾಲೆಯ ಕ್ಲಾಸ್​​ಗಳು, ಕಾರಿಡಾರ್​ನಲ್ಲಿ ಮಕ್ಕಳಿಗೆ ಪಾಠ 

ರಾಜ್ಯದ ಅದೆಷ್ಟೋ ಸರ್ಕಾರಿ ಶಾಲೆಗಳಲ್ಲಿ ದುರಸ್ತಿ ಕಾರ್ಯ ಆರಂಭವಾಗಬೇಕಿದೆ. ಅನೇಕ ಶಾಲೆಗಳ ತರಗತಿಗಳು ಸೋರುತ್ತಿವೆ. ಅದೇ ರೀತಿಯಾಗಿ, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರಾಜನಾಳ ಎಲ್​ಟಿಯ ನಮ್ಮೂರು ಹಿರಿಯ ಪ್ರಾಥಮಿಕ ಶಾಲೆಯ ತರಗತಿಗಳು ಸೋರುತ್ತಿವೆ.

ವಿಜಯಪುರ: ಸೋರುತ್ತಿರುವೆ ಸರ್ಕಾರಿ ಶಾಲೆಯ ಕ್ಲಾಸ್​​ಗಳು, ಕಾರಿಡಾರ್​ನಲ್ಲಿ ಮಕ್ಕಳಿಗೆ ಪಾಠ 
| Updated By: ವಿವೇಕ ಬಿರಾದಾರ

Updated on:Jun 12, 2024 | 1:26 PM

ವಿಜಯಪುರ, ಜೂನ್​ 12: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಇಂದೂ (ಜೂ.12) ಸಹ ಅಲ್ಲಲ್ಲಿ ಮಳೆಯಾಗಿದೆ. ಇಂಡಿ (Indi) ತಾಲೂಕಿನ ರಾಜನಾಳ ಎಲ್​ಟಿಯ ನಮ್ಮೂರು ಹಿರಿಯ ಪ್ರಾಥಮಿಕ ಶಾಲೆಯ (Government Higher Primary School) ಮಕ್ಕಳು ಜೀವ ಭಯದಲ್ಲೇ ಪಾಠ ಕೇಳುವಂತಾಗಿದೆ. ಮಳೆಯಿಂದ (Rain) ನೀರು ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು ತರಗತಿಗಳಲ್ಲಿ ಕೂತು ಪಾಠ ಕೇಳದಂತಾಗಿದೆ. ಶಾಲಾ ತರಗತಿಗಳ ಮೇಲ್ಛಾವಣಿಯ ಸಿಮೆಂಟ್ ಕಿತ್ತು ಹೋಗಿದ್ದು ಮಳೆಯ ನೀರು ನಿರಂತರವಾಗಿ ತೊಟ್ಟಿಕ್ಕುತ್ತಿದೆ. ಮೇಲ್ಛಾವಣಿಯಿಂದ ನೀರು ಸೋರುತ್ತಿದ್ದು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ತೊಟ್ಟಿಕ್ಕುವ ತರಗತಿಗಳಲ್ಲಿ ಪಾಠ ಕೇಳಲು ಸಾಧ್ಯವಾಗದೇ ಶಾಲೆಯ ಹೊರಗಡೆ ಕಾರಿಡಾರ್​ನಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ಶಿಕ್ಷಕರು ಸಹ ಅನಿವಾರ್ಯವಾಗಿ ಹೊರಗಡೆಯೇ ಪಾಠ ಹೇಳುವಂತಾಗಿದೆ.

ರಾಜನಾಳ ಎಲ್​ಟಿ ನಮ್ಮೂರು ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆ ಶಿಥಿಲವಾಗಿದೆ, ಮಳೆಯಿಂದ ನೆನದು ಮೇಲ್ಛಾವಣಿ ಕುಸಿದು ಬಿಳುವ ಆತಂಕವಿದೆ. ಮಳೆ ಕಡಿಮೆಯಾಗಿ ತರಗತಿಗಳಲ್ಲಿ ಮಕ್ಕಳು ಇರುವ ವೇಳೆ ಮೇಲ್ಛಾವಣಿ ಕುಸಿದು ಬಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ. ಹೀಗಾಗಿ ವಿಜಯಪುರ ಶಾಲಾ ಶಿಕ್ಷಣ ಇಲಾಖೆ ಆಧಿಕಾರಿಗಳು ವ್ಯವಸ್ಥಾಪಕ ನಿರ್ದೇಶಕ ಬಿಇಓ ಹಾಗೂ ಡಿಡಿಪಿಐ ಈ ನಿಟ್ಟಿನಲ್ಲಿ ಗಮನ ಹರಿಸಿ ಶಾಲಾ ಕಟ್ಟಡ ದುರಸ್ಥಿ ಮಾಡಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಶತಮಾನದ ಸಂಭ್ರಮ ಕಂಡಿರೋ ಸರ್ಕಾರಿ ಶಾಲೆಗಿಲ್ಲ ಕಾಯಕಲ್ಪ; ಮಳೆ ಬಂದರೆ ಮಕ್ಕಳ ಪಾಡು ಅಧೋಗತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:25 pm, Wed, 12 June 24

Follow us
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ