AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್

ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್

ಅಶೋಕ ಯಡಳ್ಳಿ, ವಿಜಯಪುರ
| Edited By: ವಿವೇಕ ಬಿರಾದಾರ|

Updated on:Mar 30, 2025 | 3:05 PM

Share

ಬಿಜೆಪಿಯಿಂದ ಉಚ್ಚಾಟನೆಯಾದ ನಂತರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಸ್ಥಾಪಿಸುವ ಬಗ್ಗೆ ಆಲೋಚಿಸುತ್ತಿದ್ದಾರೆ. ಜನರ ಅಭಿಪ್ರಾಯವನ್ನು ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ. ಬಿಎಸ್‍ವೈ ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಿದ ಅವರು, ಹಿಂದೂ ಪರ ಪಕ್ಷದ ಬೇಡಿಕೆ ಹೆಚ್ಚುತ್ತಿದೆ ಎಂದಿದ್ದಾರೆ. ವಿದೇಶಗಳಿಂದಲೂ ಹಣಕಾಸಿನ ನೆರವು ನೀಡುವುದಾಗಿ ಕರೆ ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಉಚ್ಛಾಟನೆಯಾದ ಬಳಿಕ ಮೊದಲ ಬಾರಿಗೆ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ತಮ್ಮ ಸ್ವ ಕ್ಷೇತ್ರ ವಿಜಯಪುರಕ್ಕೆ ಭೇಟಿ ನೀಡಿದ್ದಾರೆ. ವಿಜಯಪುರದಲ್ಲಿ ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ “ಜನರ ಅಭಿಪ್ರಾಯ ಸಂಗ್ರಹಿಸಿ ಹೊಸ ಪಕ್ಷ ಬಗ್ಗೆ ನಿರ್ಧಾರ ಮಾಡ್ತೇವೆ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಸಿದ್ರೆ ಬೇರೆ ನಿರ್ಧಾರ ಮಾಡುತ್ತೇನೆ. ಹಿಂದೂ ಪಕ್ಷ ಕಟ್ಟುವಂತೆ ಜನರಿಂದ ಕರೆ ಬರುತ್ತಿವೆ. ಭಾರತೀಯ ಜನತಾ ಪಕ್ಷದಲ್ಲಿ ಭವಿಷ್ಯ ಕಾಣುತ್ತಿಲ್ಲ. ಬಿಎಸ್​ವೈ ಕುಟುಂಬ ಮೂಲೆಗುಂಪು ಮಾಡುವ ಕೆಲಸ ಮಾಡುತ್ತಿದೆ. ಇದೆ ಮುಂದುವರಿದರೆ ವಿಜಯದಶಮಿಗೆ ಹೊಸ ಪಕ್ಷ ಸ್ಥಾಪನೆ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದರು.

“ಬಿಎಸ್ ಯಡಿಯೂರಪ್ಪ ಕುಟುಂಬ ವಿರೋಧ ಪಕ್ಷಗಳ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಹಿಂದೂಗಳ ರಕ್ಷಣೆ ಮಾಡೋದು ಯಾರು? ಬಿಜೆಪಿ ನೈತಿಕ ಅಧಃಪತನಕ್ಕೆ ಬಿ.ವೈ.ವಿಜಯೇಂದ್ರ ಅವರೇ ಕಾರಣ. ಇದನ್ನ ಹೈಕಮಾಂಡ್ ತಿಳಿದುಕೊಳ್ಳಬೇಕು.​ ಜನರ ಅಭಿಪ್ರಾಯವನ್ನು ಸರ್ವೆ ಮಾಡಿ ನಿರ್ಧಾರ ಮಾಡುತ್ತೇವೆ. ಹಿಂದೂ ಪರ ಪಕ್ಷ ಬೇಕಾ ಎಂದು ಅಭಿಪ್ರಾಯ ಸಂಗ್ರಹಿಸುತ್ತೇನೆ. ಪಕ್ಷ ಕಟ್ಟಲು ಹಣ ಕೊಡುವುದಾಗಿ ವಿದೇಶಗಳಿಂದ ಕರೆ ಬರುತ್ತಿವೆ. ಪಕ್ಷ ಕಟ್ಟಲು $11 ಲಕ್ಷ ದೇಣಿಗೆ ಕೊಡುತ್ತೇವೆಂದು ಓರ್ವ ಹೇಳಿದ್ದಾರೆ. ಜನರು ದೇಣಿಗೆ ನೀಡಲು ತಯಾರಾಗಿದ್ದಾರೆ. ಜನರು ಹೇಳಿದಂತೆ ನಾನು ಕೇಳುತ್ತೇನೆ ಎಂದರು.

Published on: Mar 30, 2025 02:30 PM

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More