AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಶಿವನಾಂದ ಪಾಟೀಲ್ ಮತ್ತು ಕಾಶಪ್ಪನವರ್ ವಿರುದ್ಧ ಕೆಂಡಕಾರಿದ ಬಸನಗೌಡ ಯತ್ನಾಳ್

ವಿಜಯಪುರ: ಶಿವನಾಂದ ಪಾಟೀಲ್ ಮತ್ತು ಕಾಶಪ್ಪನವರ್ ವಿರುದ್ಧ ಕೆಂಡಕಾರಿದ ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 30, 2025 | 11:02 AM

ವಿಜಯಾನಂದ್ ಕಾಶಪ್ಪನವರ್ ಒಬ್ಬ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಅವರು ಮೋಸ ಮಾಡಿದ್ದಾರೆ, ಸಮಾಜದ ಹೆಸರಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಎಷ್ಟು ಹಣ ದೋಚಿದ್ದು ಅಂತ ಚೆನ್ನಾಗಿ ಗೊತ್ತಿದೆ, ಅವರು ಯಾವ ಭಾಷೆಯಲ್ಲಿ ಮಾತಾಡುತ್ತಾರೋ ಅದೇ ಭಾಷೆಯಲ್ಲಿ ಉತ್ತರ ಕೊಡ್ತೀನಿ, ನನ್ನ ಶಬ್ದಕೋಶ ಅವರಿಗಿಂತ ಬಹಳ ದೊಡ್ಡದು ಎಂದು ಯತ್ನಾಳ್ ಹೇಳಿದರು.

ವಿಜಯಪುರ, ಏಪ್ರಿಲ್ 30: ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅದೇ ಜಿಲ್ಲೆಯ ಶಾಸಕರಾದ ಶಿವಾನಂದ ಪಾಟೀಲ್ (Shivanand Patil) ಹಾಗೂ ವಿಜಯಾನಂದ ಕಾಶಪ್ಪನವರ್ ನಡುವೆ ಯುದ್ಧ ಶುರುವಾಗಿದೆ. ಇಂದು ನಗರದಲ್ಲಿ ಮಾತಾಡಿದ ಯತ್ನಾಳ್ ಕಾಂಗ್ರೆಸ್ ಇಬ್ಬರ ಶಾಸಕರ ಮೇಲೂ ಕೆಂಡಕಾರಿದರು. ಶಿವಾನಂದ ಪಾಟೀಲ್​ಗೆ ಬಾಗೇವಾಡಿಯಲ್ಲಿ ಏನೂ ಸಿಗುತ್ತಿಲ್ಲ, ಹಾಗಾಗಿ ಅವರಿಗೆ ವಿಜಯಪುರ ಬರೋದು ಬೇಕಾಗಿದೆ, ಅವರು ಇಲ್ಲಿಂದ ಸ್ಪರ್ಧಿಸಿದರೆ ಮಣ್ಣು ಮುಕ್ಕೋದು ಗ್ಯಾರಂಟಿ, ಯಾಕೆಂದರೆ ಎಲ್ಲ ಹಿಂದೂಗಳು ನನಗೆ ವೋಟು ಹಾಕುತ್ತಾರೆ, ಶಿವಾನಂದ್​ ಗೆ ಮುಸಲ್ಮಾನರ ವೋಟು ಸಹ ಸಿಗಲ್ಲ, ಯಾಕೆಂದರೆ ಮುಸಲ್ಮಾನರು ತಮ್ಮ ಸಮುದಾಯದ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸುತ್ತಾರೆ ಎಂದು ಯತ್ನಾಳ್ ಹೇಳಿದರು.

ಇದನ್ನೂ ಓದಿ:  ಯತ್ನಾಳ್ ಬಗ್ಗೆ ಬಹಳ ಕನಸಿಟ್ಟುಕೊಂಡಿದ್ದೆವು, ಅದರೆ ಬಚ್ಚಲು ಬಾಯಿಂದಾಗಿ ಎಲ್ಲ ಹಾಳುಮಾಡಿಕೊಂಡಿದ್ದಾರೆ: ಸ್ವಾಮೀಜಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ