ವಿಜಯಪುರ: ರೈತರ ಜೊತೆ ಸೇರಿ ಹಂತಿ ಪದ ಹಾಡಿ ಕಾಮದಹನ ಮಾಡಿದ ಮಾಜಿ ಸಚಿವ ಬೆಳ್ಳುಬ್ಬಿ

Edited By: ಆಯೇಷಾ ಬಾನು

Updated on: Mar 25, 2024 | 10:13 AM

ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದಲ್ಲಿ ನಡೆದ ಹೋಳಿ ಹಬ್ಬದ ಸಂಭ್ರಮದಲ್ಲಿ ಮಾಜಿ ಸಚಿವ ಬೆಳ್ಳುಬ್ಬಿ ಭಾಗವಹಿಸಿ ಸಂಭ್ರಮಿಸಿದರು. ಈ ವೇಳೆ ರೈತರ ಜೊತೆ ಸೇರಿ ಸಾಂಪ್ರದಾಯಿಕ ಜಾನಪದ ಕಲೆಯ ಹಂತಿ ಪದ ಹಾಡಿ ಕಾಮದಹನ ಮಾಡಿದರು. ಶ್ರೀ ದ್ಯಾಮವ್ವ ದೇವಿ ದೇವಸ್ಥಾನದ ಬಳಿ ತಡರಾತ್ರಿ ಹೋಳಿ ಹಬ್ಬದ ಕಾಮದಹನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವಿಜಯಪುರ, ಮಾರ್ಚ್​.25: ವಿಜಯಪುರದಲ್ಲಿ ಹೋಳಿ (Holi) ಹಬ್ಬವನ್ನು ಭರ್ಜರಿಯಾಗಿ ಆಚರಿಸಲಾಗಿದೆ. ಹೋಳಿ ಹಬ್ಬ ಆಚರಣೆ ಹಿನ್ನೆಲೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ (Bellubbi) ಅವರು ಗ್ರಾಮಸ್ಥರೊಂದಿಗೆ ಬೆರೆತು ಹಂತಿ ಪದ ಹಾಡಿ ಕಾಮದಹನ ಮಾಡಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದಲ್ಲಿ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಪಟ್ಟಣದ ಶ್ರೀ ದ್ಯಾಮವ್ವ ದೇವಿ ದೇವಸ್ಥಾನದ ಬಳಿ ತಡರಾತ್ರಿ ಹೋಳಿ ಹಬ್ಬದ ಕಾಮದಹನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾಮದಹನಕ್ಕೆ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಆಗಮಿಸಿ ರೈತರ ಜೊತೆ ಸೇರಿ ಸಾಂಪ್ರದಾಯಿಕ ಜಾನಪದ ಕಲೆಯ ಹಂತಿ ಪದ ಹಾಡಿದರು. ಸಂಗಡಿಗರೊಂದಿಗೆ ಸೇರಿ ಹಂತಿ ಪದ ಹಾಡಿ ರಂಜಿಸಿದ ಮಾಜಿ ಸಚಿವ ಬೆಳ್ಳುಬ್ಬಿ ಅವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More