AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾದ ಸಮಯಕ್ಕೆ ಕರೆಂಟ್​​ ನೀಡದ್ದಕ್ಕೆ ಆಕ್ರೋಶ: ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟ ರೈತರು

ಸರಿಯಾದ ಸಮಯಕ್ಕೆ ಕರೆಂಟ್​​ ನೀಡದ್ದಕ್ಕೆ ಆಕ್ರೋಶ: ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟ ರೈತರು

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 19, 2023 | 9:21 PM

Share

ಸರಿಯಾದ ಸಮಯಕ್ಕೆ ವಿದ್ಯುತ್‌ ನೀಡದ್ದಕ್ಕೆ ರೈತರು ಆಕ್ರೋಶಗೊಂಡಿದ್ದು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ ತಂದು ಬಿಟ್ಟಿರುವಂತಹ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ್ ಗ್ರಾಮದಲ್ಲಿ ನಡೆದಿದೆ. ಪ್ರತಿದಿನ ತಡರಾತ್ರಿ ಕರೆಂಟ್ ನೀಡುತ್ತಾರೆ. ಕತ್ತಲೆಯಲ್ಲಿ ಜಮೀನುಗಳಿಗೆ ಹೋಗಿ ನೀರುಣಿಸುವುದು ಹೇಗೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ಸಮಸ್ಯೆ ಅಧಿಕಾರಿಗಳಿಗೆ ಅರ್ಥವಾಗಲಿ ಎಂದು ಮೊಸಳೆ ತಂದಿರುವುದಾಗಿ ಹೇಳಿದ್ದಾರೆ.

ವಿಜಯಪುರ, ಅಕ್ಟೋಬರ್​​​ 19: ಸರಿಯಾದ ಸಮಯಕ್ಕೆ ವಿದ್ಯುತ್‌ ನೀಡದ್ದಕ್ಕೆ ರೈತರು ಆಕ್ರೋಶಗೊಂಡಿದ್ದು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ (crocodile) ತಂದು ಬಿಟ್ಟಿರುವಂತಹ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ್ ಗ್ರಾಮದಲ್ಲಿ ನಡೆದಿದೆ. ಪ್ರತಿದಿನ ತಡರಾತ್ರಿ ಕರೆಂಟ್ ನೀಡುತ್ತಾರೆ. ಕತ್ತಲೆಯಲ್ಲಿ ಜಮೀನುಗಳಿಗೆ ಹೋಗಿ ನೀರುಣಿಸುವುದು ಹೇಗೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕತ್ತಲೆಯಲ್ಲಿ ಜಲಚರ ಪ್ರಾಣಿಗಳಿಂದ ತೊಂದರೆ ಇದೆ ಎಂದರೂ ಸಹ ಅಧಿಕಾರಿಗಳು ಕೇಳುತ್ತಿಲ್ಲ. ರಾತ್ರಿ ವೇಳೆ ಕರೆಂಟ್ ನೀಡಿದರೆ ನಾವೇನು ಮಾಡುವುದು. ನಮ್ಮ ಸಮಸ್ಯೆ ಅಧಿಕಾರಿಗಳಿಗೆ ಅರ್ಥವಾಗಲಿ ಎಂದು ಮೊಸಳೆಯನ್ನ ತಂದಿದ್ದೇವೆ ಎಂದು ರೈತರು ಹೇಳಿದ್ದಾರೆ. ನಿನ್ನೆ ರಾತ್ರಿ ಪಾಳಿಯಲ್ಲಿ ನೀರು ಉಣಿಸುವಾಗ ಜಮೀನಿನಲ್ಲಿ ಕಾಣಿಸಿಕೊಂಡ ಮೊಸಳೆಯನ್ನೇ ಹಿಡಿದು ಟ್ರ್ಯಾಕ್ಟರ್ ಮೂಲಕ ವಿದ್ಯುತ್ ವಿತರಣಾ ಕೇಂದ್ರಕ್ಕೆ ತಂದಿದ್ದು, ಕೊನೆಗೆ ರೈತರ ಮನವೋಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ‌ ತೆಗೆದುಕೊಂಡ ಹೋಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 19, 2023 09:20 PM

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More